ರಾಜ್ಯ

ಬೆಂಗಳೂರು: ಅನಾರೋಗ್ಯದಿಂದ ಬೇಸತ್ತು ಮಹಿಳಾ ಉದ್ಯೋಗಿ ಆತ್ಮಹತ್ಯೆ

Lingaraj Badiger

ಬೆಂಗಳೂರು: ತೀವ್ರ ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟಕ್ಕೆ ಬೇಸತ್ತು ಮಹಿಳಾ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಸವನಗುಡಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚೈತ್ರಾ(39) ಮೃತ ದುರ್ದೈವಿ. ಪತಿ ಸುರೇಶ್ ಮುದ್ರಣಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. 

ಕೆಆರ್ ರಸ್ತೆಯ ಎದುರಿನ ಗರಡಿ ಅಪಾರ್ಟ್ ಮೆಂಟ್ ನಲ್ಲಿ ಶುಕ್ರವಾರ ರಾತ್ರಿ ಚೈತ್ರಾ ನೇಣಿಗೆ ಶರಣಾಗಿದ್ದಾರೆ.

ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT