ರಾಜ್ಯ

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 4 ಸಾವಿರ ರೂ. ನೆರವು ನೀಡಲು ಸರ್ಕಾರ ಆದೇಶ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೆರವು ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಎರಡು ಕಂತುಗಳಲ್ಲಿ ಹಣ ವರ್ಗಾವಣೆ ಮಾಡುವಂತೆ ಸರ್ಕಾರ ಶನಿವಾರ ಆದೇಶಿಸಿದೆ. 

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೆರವು ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಎರಡು ಕಂತುಗಳಲ್ಲಿ ಹಣ ವರ್ಗಾವಣೆ ಮಾಡುವಂತೆ ಸರ್ಕಾರ ಶನಿವಾರ ಆದೇಶಿಸಿದೆ. 

ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯವಾದ ಹಣವನ್ನು ಆಕಸ್ಮಿಕ ನಿಧಿಯಿಂದ ಪಡೆಯಲಾಗುತ್ತದೆ ಮತ್ತು 2019-20ರ ಪೂರಕ ಬಜೆಟ್ ಹಂಚಿಕೆಗಳಲ್ಲಿ ಮರುಹೊಂದಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಕೃಷಿ ಇಲಾಖೆಯ ನಿರ್ದೇಶಕರು ಈ ಯೋಜನೆಯಡಿ  ವಿತರಣಾ ಅಧಿಕಾರಿಯಾಗಿರುತ್ತಾರೆ ಮತ್ತು ಹಣಕಾಸು ಇಲಾಖೆ ಆದೇಶ ಹೊರಡಿಸಿದ ನಂತರ ಅಧಿಕಾರಿಯು ಫಂಡ್ ನ್ನು ಡ್ರಾ ಮಾಡಿಕೊಳ್ಳಬಹುದಾಗಿದೆ. 

ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ ಮೂರು ಕಂತುಗಳಲ್ಲಿ ವರ್ಷಕ್ಕೆ 6 ಸಾವಿರ ರೂ. ನೀಡಲಾಗುತ್ತಿದೆ. ಇದೀಗ ಹೆಚ್ಚುವರಿಯಾಗಿ ರಾಜ್ಯಸರ್ಕಾರದಿಂದ ಎರಡು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿತಂತೆ 4 ಸಾವಿರ ರೂ. ಗಳನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT