ರಾಜ್ಯ

ಕೆಪಿಎಸ್‌ಸಿ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್.ಪಿ.ಷಡಕ್ಷರಿ ಸ್ವಾಮಿ ನೇಮಕ

Raghavendra Adiga

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ನೂತನ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್.ಪಿ. ಷಡಕ್ಷರಿ ಸ್ವಾಮಿ ನೇಮಕವಾಗಿದ್ದಾರೆ.

ರಾಜ್ಯ ಸರ್ಕಾರದ ಶಿಫಾರಸಿನ ಅನ್ವಯ ರಾಜ್ಯಪಾಲರು ನೂತನ ಅಧ್ಯಕ್ಷರ ನೇಮಕ ಮಾಡಿ ಆದೇಶಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕೆಪಿಎಸ್‌ಸಿಅಧ್ಯಕ್ಷರಾಗಿದ್ದ ಶ್ಯಾಮ್ ಭಟ್ ಅವರ ಆವಧಿ ಕಳೆದ ಡಿಸೆಂಬರ್ ನಲ್ಲಿ ಮುಕ್ತಾಯವಾಗಿದ್ದು ಅಲ್ಲಿಂದೀಚೆಗೆ ಅಧ್ಯಕ್ಷ ಪದವಿ ಖಾಲಿಯಾಗಿಯೇ ಉಳಿದಿತ್ತು. ಆ ಬಳಿಕ ಅಧಿಕಾರಕ್ಕೇರಿದ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರ ಷಡಕ್ಷರಿ ಸ್ವಾಮಿ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಇದೀಗ ಅವರೇ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

 ಷಡಕ್ಷರಿ ಸ್ವಾಮಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಹೋದರರಾಗಿದ್ದಾರೆ.

SCROLL FOR NEXT