ಫುಟ್ ಪಾತ್ ಮೇಲಿದ್ದ ಜನರ ಮೇಲೆ ಹರಿದ ಕಾರು 
ರಾಜ್ಯ

ಬೆಂಗಳೂರು: ಫುಟ್ ಪಾತ್ ಮೇಲಿದ್ದ ಜನರ ಮೇಲೆ ಹರಿದ ಕಾರು, ಸಿಸಿಟಿವಿಯಲ್ಲಿ ಭೀಕರ ವಿಡಿಯೋ ಸೆರೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡುಕ ಚಾಲಕನೋರ್ವ ಭಾರಿ ಅವಾಂತರ ಸೃಷ್ಟಿಸಿದ್ದು, ಕುಡಿತದ ಅಮಲಿನಲ್ಲಿ ಫುಟ್ ಪಾತ್ ಪಾದಾಚಾರಿಗಳ ಕಾರು ಹತ್ತಿಸಿರುವ ಭೀಕರ ಘಟನೆ ಹೆಚ್ಎಸ್ಆರ್ ಲೇಔಟ್ ನಲ್ಲಿ ನಡೆದಿದೆ. ಈ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಲ್ಲಿ ಘಟನೆ, ಪ್ರಕರಣ ದಾಖಲು, ಚಾಲಕನ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡುಕ ಚಾಲಕನೋರ್ವ ಭಾರಿ ಅವಾಂತರ ಸೃಷ್ಟಿಸಿದ್ದು, ಕುಡಿತದ ಅಮಲಿನಲ್ಲಿ ಫುಟ್ ಪಾತ್ ಪಾದಾಚಾರಿಗಳ ಕಾರು ಹತ್ತಿಸಿರುವ ಭೀಕರ ಘಟನೆ ಹೆಚ್ಎಸ್ಆರ್ ಲೇಔಟ್ ನಲ್ಲಿ ನಡೆದಿದೆ. ಈ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ಮೂಲಗಳ ಪ್ರಕಾರ ಜೆಪಿ ನಗರದ ಕೊತ್ತನೂರು ದಿಣ್ಣೆ ನಿವಾಸಿ ರಾಜೇಂದ್ರ ಕೆ ಎಂಬಾತ ಕಂಠಪೂರ್ತಿ ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರು ಓಡಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನಿಲ್ಲಿಸಿದ್ದ ಬೈಕ್‍ಗಳಿಗೆ ಡಿಕ್ಕಿ ಹೊಡೆದು ಫುಟ್‍ಪಾತ್ ಮೇಲೆ ಕಾರನ್ನು ಹತ್ತಿಸಿದ್ದಾನೆ. ಪರಿಣಾಮ ಫುಟ್‍ಪಾತ್ ಅಂಗಡಿಯ ಮುಂದೆ ನಿಂತಿದ್ದ ಹಾಗೂ ನಡೆದುಕೊಂಡು ಹೋಗುತ್ತಿದ್ದ ಒಟ್ಟು 8 ಜನರಿಗೆ ಡಿಕ್ಕಿಹೊಡೆದಿದ್ದಾನೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ತಕ್ಷಣವೇ ಕಾರಿನ ಬಳಿಗೆ ಬಂದು ಗಾಯಾಳುಗಳನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಚಾಲಕನನ್ನು ಥಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ, ಆರೋಪಿ ಚಾಲಕ ರಾಜೇಂದ್ರನನ್ನು ಪೊಲೀಸರು ವಶಕ್ಕೆ ಪಡೆದು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ಮದ್ಯ ಸೇವಿಸಿರುವುದು ಖಚಿತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣದ ಸಂಬಂಧ ಹೆಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಚಾಲಕ ರಾಜೇಂದ್ರನನ್ನು ಬಂಧಿಸಿರುವ ಪೊಲೀಸರು ವಿಚಾರಗೆ ಒಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT