ಫುಟ್ ಪಾತ್ ಮೇಲಿದ್ದ ಜನರ ಮೇಲೆ ಹರಿದ ಕಾರು 
ರಾಜ್ಯ

ಬೆಂಗಳೂರು: ಫುಟ್ ಪಾತ್ ಮೇಲಿದ್ದ ಜನರ ಮೇಲೆ ಹರಿದ ಕಾರು, ಸಿಸಿಟಿವಿಯಲ್ಲಿ ಭೀಕರ ವಿಡಿಯೋ ಸೆರೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡುಕ ಚಾಲಕನೋರ್ವ ಭಾರಿ ಅವಾಂತರ ಸೃಷ್ಟಿಸಿದ್ದು, ಕುಡಿತದ ಅಮಲಿನಲ್ಲಿ ಫುಟ್ ಪಾತ್ ಪಾದಾಚಾರಿಗಳ ಕಾರು ಹತ್ತಿಸಿರುವ ಭೀಕರ ಘಟನೆ ಹೆಚ್ಎಸ್ಆರ್ ಲೇಔಟ್ ನಲ್ಲಿ ನಡೆದಿದೆ. ಈ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಲ್ಲಿ ಘಟನೆ, ಪ್ರಕರಣ ದಾಖಲು, ಚಾಲಕನ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡುಕ ಚಾಲಕನೋರ್ವ ಭಾರಿ ಅವಾಂತರ ಸೃಷ್ಟಿಸಿದ್ದು, ಕುಡಿತದ ಅಮಲಿನಲ್ಲಿ ಫುಟ್ ಪಾತ್ ಪಾದಾಚಾರಿಗಳ ಕಾರು ಹತ್ತಿಸಿರುವ ಭೀಕರ ಘಟನೆ ಹೆಚ್ಎಸ್ಆರ್ ಲೇಔಟ್ ನಲ್ಲಿ ನಡೆದಿದೆ. ಈ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ಮೂಲಗಳ ಪ್ರಕಾರ ಜೆಪಿ ನಗರದ ಕೊತ್ತನೂರು ದಿಣ್ಣೆ ನಿವಾಸಿ ರಾಜೇಂದ್ರ ಕೆ ಎಂಬಾತ ಕಂಠಪೂರ್ತಿ ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರು ಓಡಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನಿಲ್ಲಿಸಿದ್ದ ಬೈಕ್‍ಗಳಿಗೆ ಡಿಕ್ಕಿ ಹೊಡೆದು ಫುಟ್‍ಪಾತ್ ಮೇಲೆ ಕಾರನ್ನು ಹತ್ತಿಸಿದ್ದಾನೆ. ಪರಿಣಾಮ ಫುಟ್‍ಪಾತ್ ಅಂಗಡಿಯ ಮುಂದೆ ನಿಂತಿದ್ದ ಹಾಗೂ ನಡೆದುಕೊಂಡು ಹೋಗುತ್ತಿದ್ದ ಒಟ್ಟು 8 ಜನರಿಗೆ ಡಿಕ್ಕಿಹೊಡೆದಿದ್ದಾನೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ತಕ್ಷಣವೇ ಕಾರಿನ ಬಳಿಗೆ ಬಂದು ಗಾಯಾಳುಗಳನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಚಾಲಕನನ್ನು ಥಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ, ಆರೋಪಿ ಚಾಲಕ ರಾಜೇಂದ್ರನನ್ನು ಪೊಲೀಸರು ವಶಕ್ಕೆ ಪಡೆದು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ಮದ್ಯ ಸೇವಿಸಿರುವುದು ಖಚಿತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣದ ಸಂಬಂಧ ಹೆಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಚಾಲಕ ರಾಜೇಂದ್ರನನ್ನು ಬಂಧಿಸಿರುವ ಪೊಲೀಸರು ವಿಚಾರಗೆ ಒಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT