ಅಮಿತ್ ಶಾ 
ರಾಜ್ಯ

ಕೇಂದ್ರದಿಂದ ಕರ್ನಾಟಕಕ್ಕೆ 1 ಸಾವಿರ ಕೋಟಿ ರೂ. ಬರ ಪರಿಹಾರ ಘೋಷಣೆ

ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಒಟ್ಟು 4,432 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಲು ಮಂಗಳವಾರ ಅನುಮತಿ ನೀಡಿದೆ.

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಒಟ್ಟು 4,432 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಲು ಮಂಗಳವಾರ ಅನುಮತಿ ನೀಡಿದೆ.

ಕಳೆದ ವರ್ಷ ಹಿಂಗಾರು ಅವಧಿಯಲ್ಲಿ ಸಂಭವಿಸಿದ ಬರಕ್ಕೆ ಕೇಂದ್ರ ಸರ್ಕಾರ ಈಗ ಪರಿಹಾರ ಬಿಡುಗಡೆ ಮಾಡುತ್ತಿದೆ.

ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿದ್ದ ಉನ್ನತ ಮಟ್ಟದ ಸಮಿತಿ ಕೇಂದ್ರದಿಂದ ಹೆಚ್ಚುವರಿ ನೆರವು ಬಿಡುಗಡೆಗೆ ಇಂದು ಒಪ್ಪಿಗೆ ಸೂಚಿಸಿದೆ.

ಕರ್ನಾಟಕ, ಒಡಿಶಾ ಹಾಗೂ ಹಿಮಾಚಲ ಪ್ರದೇಶದಲ್ಲಿ ಉಂಟಾದ ನೈಸರ್ಗಿಕ ವಿಪತ್ತುಗಳಿಗೆ ಒಟ್ಟಾರೆ 4432.10 ಕೋಟಿ ರೂ. ನೆರವು ಘೋಷಣೆ ಮಾಡಿದೆ.

ರಾಜ್ಯದಲ್ಲಿನ ಹಿಂಗಾರು ಅವಧಿಯ ಬರ ಪರಿಸ್ಥಿತಿಗಾಗಿ 1029.39 ಕೋಟಿ ರೂ., ಒಡಿಶಾದಲ್ಲಿ ಚಂಡಮಾರು ಫನಿಯಿಂದಾದ ಹಾನಿಗೆ 3338.22 ಕೋಟಿ ರೂ. ಹಾಗೂ ಹಿಮಾಚಲ ಪ್ರದೇಶದಲ್ಲಿ ಉಂಟಾದ ಹಿಮಪಾತದಿಂದಾದ ನಷ್ಟ ಪರಿಹಾರವಾಗಿ 64.49 ಕೋಟಿ ರೂ. ನೆರವು ಬಿಡುಗಡೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT