ಸಂಗ್ರಹ ಚಿತ್ರ 
ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ: ಆಗಸ್ಟ್ 22 ರಂದು 'ಗಜಪಯಣ'

ವಿಶ್ವವಿಶ್ಯಾತ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲು ಗಜಪಡೆಗಳ ಪಟ್ಟಿ ಸಿದ್ಧವಾಗಿದೆ ಆಗಸ್ಟ್ 22 ರಂದು ಮೊದಲ ಗಜಪಡೆ ಮೈಸೂರಿಗೆ ಪ್ರಯಾಣ ಬೆಳೆಸಲಿದೆ.

ಮೈಸೂರು: ವಿಶ್ವವಿಶ್ಯಾತ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲು ಗಜಪಡೆಗಳ ಪಟ್ಟಿ ಸಿದ್ಧವಾಗಿದೆ ಆಗಸ್ಟ್ 22 ರಂದು ಮೊದಲ ಗಜಪಡೆ ಮೈಸೂರಿಗೆ ಪ್ರಯಾಣ ಬೆಳೆಸಲಿದೆ.

ಹುಣಸೂರು ತಾಲೂಕಿನ ವೀರನಹೊಸಳ್ಳಿಯಿಂದ ಮೈಸೂರು ಅರಮನೆಗೆ ಗಜಪಡೆಗಳ ಮೊದಲ ತಂಡ ಆಗಮಸಲಿದೆ. 

ಆಗಸ್ಟ್ 22ರ ಬೆ.10.30ಕ್ಕೆ ಗಜಪಯಣಕ್ಕೆ ಚಾಲನೆ ದೊರೆಯಲಿದೆ. ದಸರಾ ಗಜಪಡೆಯ ಮೊದಲ ತಂಡದಲ್ಲಿ ಆರು ಆನೆಗಳು ಇರಲಿವೆ. ಚಿನ್ನದ ಅಂಬಾರಿ ಹೊರಲಿರುವ ಸಾರಥಿ ಅರ್ಜುನ ನೇತೃತ್ವದ ಆರು ಆನೆಗಳಿಗೆ ಗಣ್ಯರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಪ್ರಯಾಣಕ್ಕೆ ಹಸಿರು ನಿಶಾನೆ ತೋರಲಾಗುವುದು. 

ಗಜ ಪಡೆಗಳ ಪಯಣಕ್ಕೆ ಈಗಾಗಲೇ ಮೈಸೂರು ದಸರಾ ಸಮಿತಿ ಹಾಗೂ ಅರಣ್ಯ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿವೆ. 

ಈ ಬಾರಿ ದಸರಾದಲ್ಲಿ 14 ಆನೆಗಳು ಭಾಗಿಯಾಗಲಿವೆ. ಎರಡು ತಂಡಗಳಾಗಿ ಮೈಸೂರಿಗೆ ಬರಲಿದೆ ಗಜಪಡೆಗಳು. 

ಮೊದಲ ತಂಡದಲ್ಲಿ 6 ಆನೆಗಳು. ಅಂದರೆ ಅರ್ಜುನ, ಅಭಿಮನ್ಯು ಮತ್ತು ವರಲಕ್ಷ್ಮಿ, ಧನಂಜಯ, ವಿಜಯ ಮತ್ತು ಈಶ್ವರ ಆನೆಗಳು  ಎರಡನೆ ತಂಡದಲ್ಲಿ 8 ಆನೆಗಳು ಇರಲಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT