ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು ಉದ್ಯಮಿಯಿಂದ 5.75 ಕೋಟಿ ರೂ ವಶಪಡಿಸಿಕೊಂಡ ಐಟಿ ಇಲಾಖೆ 

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೈಸೂರಿನ ಉದ್ಯಮಿಯಿಂದ 5.75 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.  

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೈಸೂರಿನ ಉದ್ಯಮಿಯಿಂದ 5.75 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. 


ಮೈಸೂರಿನಲ್ಲಿ ಆಸ್ತಿಯನ್ನು ಈ ಉದ್ಯಮಿ ಅಧಿಕ ಮೊತ್ತಕ್ಕೆ ಮಾರಾಟ ಮಾಡಿ ಅಪಾರ ನಗದನ್ನು ಪಡೆದಿದ್ದಾರೆ ಎಂದು ಗುಪ್ತಚರ ಮಾಹಿತಿ ಬಂದ ಕೂಡಲೇ ಐಟಿ ಅಧಿಕಾರಿಗಳು ಖರೀದಿದಾರರು ಮತ್ತು ಮಾರಾಟಗಾರರ ಮೇಲೆ ಕಣ್ಗಾವಲು ಇರಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದರು.


ಐಟಿ ಅಧಿಕಾರಿಗಳು ಮನ್ನರ್ ಸಿಲ್ಕ್ ಶೋರೂಂನ ಪಾಲುದಾರ ಸಂದೀಪ್ ಅವರ ಮೇಲೆ ದಾಳಿ ನಡೆಸಿದರು. ಮಾರಾಟಗಾರ ಧರ್ಮರಾಜ ಚೆರ್ರಿ ಅಂಡ್ ಸನ್ಸ್ ಅವರ ನಿವಾಸದಲ್ಲಿ ಹಣ ನೀಡಲು ಬಂದಾಗ ಐಟಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ತನಿಖೆ ನಡೆಸಿದಾಗ 5.75 ಕೋಟಿ ರೂಪಾಯಿ ನಗದು ಸಿಕ್ಕಿದೆ.


ಆಸ್ತಿಯನ್ನು 13.75 ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿತ್ತು. ಅದರಲ್ಲಿ 8 ಕೋಟಿ ರೂಪಾಯಿ ಬ್ಯಾಂಕ್ ಮೂಲಕ ನೀಡಲಾಗಿತ್ತು. ಉಳಿದ ಹಣವನ್ನು ನಗದು ರೂಪದಲ್ಲಿ ನೀಡುವ ಮಾತುಕತೆಯಾಗಿತ್ತು. ಆದಾಯ ತೆರಿಗೆಯಿಂದ ತಪ್ಪಿಸಿಕೊಳ್ಳಲು ನಗದು ಮೂಲಕ ನೀಡಲು ಮಾತುಕತೆಯಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT