ಭೂಕುಸಿತದಿಂದಾಗಿ ಏಳು ರೈಲುಗಳನ್ನು ರದ್ದುಗೊಳಿಸಿದ ನೈಋತ್ಯ ರೈಲ್ವೆ 
ರಾಜ್ಯ

ಭೂಕುಸಿತದಿಂದಾಗಿ ಏಳು ರೈಲುಗಳನ್ನು ರದ್ದುಗೊಳಿಸಿದ ನೈಋತ್ಯ ರೈಲ್ವೆ

ಸಕಲೇಶಪುರ-ಸುಬ್ರಮಣ್ಯ ರಸ್ತೆ ಘಾಟ್ ವಿಭಾಗದ ನಡುವೆ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಲ್ಲಿ ಏಳು ರೈಲುಗಳನ್ನು ರದ್ದುಪಡಿಸುವುದಾಗಿ ನೈಋತ್ಯ ರೈಲ್ವೆ ಪ್ರಕಟಿಸಿದೆ.

ಬೆಂಗಳೂರು: ಸಕಲೇಶಪುರ-ಸುಬ್ರಮಣ್ಯ ರಸ್ತೆ ಘಾಟ್ ವಿಭಾಗದ ನಡುವೆ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಲ್ಲಿ ಏಳು ರೈಲುಗಳನ್ನು ರದ್ದುಪಡಿಸುವುದಾಗಿ ನೈಋತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ಗುರುವಾರ ಪ್ರಕಟಿಸಿದೆ.

ಆಗಸ್ಟ್ 24 ರಂದು ಕಾರವಾರನಿಂದ ಪ್ರಯಾಣ ಪ್ರಾರಂಭಿಸಬೇಕಿದ್ದ ರೈಲು ಸಂಖ್ಯೆ 16516 ಕಾರವಾರ್-ಯಶವಂತಪುರ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16518/16524 ಕಣ್ಣೂರು / ಕಾರವಾರ್ - ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರದ್ದುಗೊಂಡಿದೆ. ಆಗಸ್ಟ್ 23 ಮತ್ತು 24 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಪ್ರಯಾಣ ಪ್ರಾರಂಭಿಸಬೇಕಿದ್ದ ಕೆಎಸ್‌ಆರ್ ಬೆಂಗಳೂರು - ಕಣ್ಣೂರು / ಕಾರ್ವಾರ್ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸಲಾಗಿದೆ ಎಂದು ಎಸ್‌ಡಬ್ಲ್ಯುಆರ್ ಪ್ರಕಟಣೆ ತಿಳಿಸಿದೆ. ಆ.25ರ ಯಶವಂತಪುರ - ಮಂಗಳೂರು ಮಾರ್ಗದ ರೈಲು ಕೂಡ ರದ್ದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?