ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬೈಕ್ ಗೆ ಟಾಟಾ ಏಸ್ ಡಿಕ್ಕಿ, ಮುಖ್ಯ ಪೊಲೀಸ್ ಪೇದೆ ಪುತ್ರ ಸಾವು

ಟಾಟಾ ಏಸ್ ಸರಕು ಸಾಗಣೆ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗಲೂರು ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ಟಾಟಾ ಏಸ್ ಸರಕು ಸಾಗಣೆ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗಲೂರು ರಸ್ತೆಯಲ್ಲಿ ನಡೆದಿದೆ.

ಕೆ ಆರ್ ಪುರಂ ಪೊಲೀಸ್ ಠಾಣೆಯ ಮುಖ್ಯಪೇದೆ ಬುದ್ದೇಗೌಡ ಅವರ ಪುತ್ರ ರೇವಾ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿ ಧನುಷ್(19) ಮೃತಪಟ್ಟವರು.

ಧನುಷ್ ನಿನ್ನೆ ಬೆಳಿಗ್ಗೆ 8.30ರ ವೇಳೆ ಕಾಲೇಜಿಗೆ ಬೈಕ್‍ನಲ್ಲಿ ಬಾಗಲೂರು ಸಾತನೂರು ರಸ್ತೆಯಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮಾರ್ಗ ಮಧ್ಯೆ ಮುಂದೆ ಹೋಗುತ್ತಿದ್ದ ಟಾಟಾ ಏಸ್ ಸರಕು ಸಾಗಣೆ ವಾಹನ ಏಕಾಏಕಿ ಎಡಗಡೆ ತಿರುವು ತೆಗೆದುಕೊಂಡಿದ್ದರಿಂದ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು ಕೆಳಗೆಬಿದ್ದ ಧನುಷ್ ಗಾಯಗೊಂಡಿದ್ದಾನೆ. ತಕ್ಷಣ ಆತನನ್ನು ಮಾನಸ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಮಗನ ಸಾವಿನ ಸುದ್ದಿ ಕೇಳಿ ಆಘಾತಗೊಂಡು ಅಸ್ವಸ್ಥರಾಗಿದ್ದ  ಬುದ್ದೇಗೌಡ ಅವರನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಜಾಲ ಸಂಚಾರ ಪೊಲೀಸ್ ಇನ್ಸ್ ಪೆಕ್ಟರ್ ವೀರೇಂದ್ರಕುಮಾರ್ ಅವರು, ಟಾಟಾ ಏಸ್ ಲಗೇಜ್ ವಾಹನ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT