ಗೌರಿ ಲಂಕೇಶ್ 
ರಾಜ್ಯ

ಬೇರೆ ಬೇರೆ ಜೈಲುಗಳಿಗೆ  ಗೌರಿ ಲಂಕೇಶ್ ಹಂತಕರ ಸ್ಥಳಾಂತರ

ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ನಾಲ್ವರನ್ನು ಹಂತಕರನ್ನು  ರಾಜ್ಯದಲ್ಲಿನ ಬೇರೆ ಬೇರೆ ಜೈಲುಗಳಿಗೆ  ಸದ್ಯದಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.  

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ನಾಲ್ವರನ್ನು ಹಂತಕರನ್ನು  ರಾಜ್ಯದಲ್ಲಿನ ಬೇರೆ ಬೇರೆ ಜೈಲುಗಳಿಗೆ  ಸದ್ಯದಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.  

ಗೌರಿ ಲಂಕೇಶ್ ಹತ್ಯೆ ಆರೋಪದ ಮೇಲೆ ಬಂಧಿಸಲಾಗಿರುವ ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಮನೋಹರ್ ಎಡಾವೆ, ಮತ್ತು ಅಮಿತ್ ದಿಗ್ವೀಕರ್ ಅವರನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಬೇಕೆಂದು ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದ್ದಾರೆ.

ಆರೋಪಿಗಳ ಜೀವಕ್ಕೆ ಬೆದರಿಕೆ ಇರುವುದರಿಂದ ಎಲ್ಲರನ್ನೂ ಒಂದೇ ಜೈಲಿನಲ್ಲಿಡುವುದು ಸರಿಯಲ್ಲ, ಸಾಕ್ಷ್ಯ ನಾಶಕ್ಕೂ ಯತ್ನಿಸಬಹುದು. ಈ ಹಿನ್ನೆಲೆಯಲ್ಲಿ  ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವುದು ಉತ್ತಮ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಆರೋಪಿ ಕಾಳೆ -ಮೈಸೂರು ಜೈಲಿಗೆ, ವಾಗ್ಮೋರೆ- ತುಮಕೂರು ಎಡಾವೆ- ಶಿವಮೊಗ್ಗ  ಅಮಿತ್ ದಿಗ್ವೇಕರ್ - ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಎಡಿಜಿಪಿ ಎನ್ ಎಸ್ ಮೇಘರಿಕ್ ಆದೇಶ ಹೊರಡಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT