ಅಲ್ಟಿಮೇಟ್ ಜಿಮ್ ನ ತರಬೇತುದಾರ ಶಿವಕುಮಾರ್ 
ರಾಜ್ಯ

ಫಿಟ್ನೆಸ್​ ಆಸೆಯಿಂದ ಪುರುಷತ್ವಕ್ಕೇ ಕುತ್ತು; ಸ್ಟಿರಾಯ್ಡ್ ಸಹಿತ ಡ್ರಗ್ಸ್ ಮಾರಾಟ: ಜಿಮ್ ತರಬೇತುದಾರನ ಬಂಧನ

ದೇಹ ಹುರಿಗೊಳಿಸುವ ಸಲುವಾಗಿ ತನ್ನ ಜಿಮ್ ಗ್ರಾಹಕರಿಗೆ ಸ್ಟಿರಾಯ್ಡ್ ಸಹಿತ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಜಿಮ್ ತರಬೇತುದಾರನನ್ನು ಬಂಧಿಸಲಾಗಿದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅಲ್ಟಿಮೇಟ್ ಜಿಮ್ ನ ತರಬೇತುದಾರ ಶಿವಕುಮಾರ್ ಬಂಧಿತ ಆರೋಪಿ

ಬೆಂಗಳೂರು: ದೇಹ ಹುರಿಗೊಳಿಸುವ ಸಲುವಾಗಿ ತನ್ನ ಜಿಮ್ ಗ್ರಾಹಕರಿಗೆ ಸ್ಟಿರಾಯ್ಡ್ ಸಹಿತ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಜಿಮ್ ತರಬೇತುದಾರನನ್ನು ಬಂಧಿಸಲಾಗಿದೆ.

ಬೆಂಗಳೂರಿನ ಚಾಮರಾಜಪೇಟೆಯ ನಾಲ್ಕನೇ ಮುಖ್ಯರಸ್ತೆಯಲ್ಲಿರುವ ಅಲ್ಟಿಮೇಟ್ ಜಿಮ್ ನ ತರಬೇತುದಾರ ಶಿವಕುಮಾರ್ ಎಂಬಾತನನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದು, ಶಿವಕುಮಾರ್ ಸ್ಟಿರಾಯ್ಡ್​ನಂಥ ಹಾನಿಕಾರಕ ಔಷಧಿಯನ್ನ ಗ್ರಾಹಕರಿಗೆ, ದೇಹ ದಪ್ಪ ಮಾಡಲು ಮತ್ತು ತೆಳುವಾಗಿಸಲು ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಕುರಿತಂತೆ ಮಾಹಿತಿ ಕಲೆಹಾಕಿದ ಪೊಲೀಸರು ಅಲ್ಟಿಮೇಟ್ ಜಿಮ್ ಮೇಲೆ ದಾಳಿ ಮಾಡಿದ್ದಾರೆ. 

ದಾಳಿ ವೇಳೆ ನಿಷೇಧಕ್ಕೊಳಪಟ್ಟಿರುವ ಸ್ಟಿರಾಯ್ಡ್ ​ಗಳು, ಪ್ರೋಟೀನ್ ಬಾಟಲ್ ​ಗಳು, ಮತ್ತು ಕೆಲವು ಟ್ಯಾಬ್ಲೆಟ್ ಮತ್ತು ಇಂಜೆಕ್ಷನ್​ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸ್ಟಿರಾಯ್ಡ್ ಬಳಕೆಯಿಂದ ದೇಹದಲ್ಲಿ ಹಲವು ರೀತಿಯ ಸೈಡ್​ ಎಫೆಕ್ಸ್ಟ್​ಗಳಾಗುತ್ತವೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಸದ್ಯ ಪೊಲೀಸರು ಜಿಮ್ ಟ್ರೈನರ್​ನನ್ನು ಬಂಧಿಸಿ, ಆತನ ಮೇಲೆ ಐಪಿಸಿ ಸೆಕ್ಷನ್ 406 ಮತ್ತು 420ರ ಅಡಿ ಪ್ರಕರಣ ದಾಖಲಿಸಿದ್ದಾರೆ. ನಿಷೇಧಿತ ಸ್ಟಿರಾಯ್ಡ್​ಗಳ ದುರ್ಬಳಕೆ ಕುರಿತಂತೆ ಔಷಧ ನಿಯಂತ್ರಣ ಇಲಾಖೆಗೂ ಪೊಲೀಸರು ಪತ್ರ ಬರೆಯಲಿದ್ದಾರೆ ಎನ್ನಲಾಗಿದೆ.

ಪುರುಷತ್ವಕ್ಕೇ ಬರುತ್ತೆ ಕುತ್ತು!
ಸ್ಟಿರಾಯ್ಡ್​ ಬಳಕೆಯಿಂದ ಗಂಡಸರ ಪುರುಷತ್ವಕ್ಕೇ ತೊಂದರೆ ಉಂಟಾಗುತ್ತದೆ. ಈ ಸ್ಟಿರಾಯ್ಡ್​ ಗಳು ರಕ್ತಕ್ಕೆ ಸೇರುವುದರಿಂದ ವೀರ್ಯಾಣುಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಫಿಟ್​ನೆಸ್​ ಬೇಕೆಂದು ಸ್ಟಿರಾಯ್ಡ್​ ಸೇವಿಸಿದರೆ ಪುರುಷತ್ವವನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ಕುರಿತು ಮಿಮಿಕ್ರಿ, ದಿವಂಗತ ತಾಯಿಗೆ ಅಪಮಾನ: ‘ಅಸಭ್ಯ ಸಂಸ್ಕೃತಿಗೆ ರಾಹುಲ್ ಬೆಂಬಲ’; ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ

ರಷ್ಯಾ ಸಂಸತ್ ಚುನಾವಣೆ ಮಧ್ಯೆ ಮಾಸ್ಕೋ ಮೇಲೆ ಉಕ್ರೇನ್‌ನಿಂದ ಭೀಕರ ದಾಳಿ: 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ!

ದೆಹಲಿ: ಎಸ್. ಜೈಶಂಕರ್, ಮಾಜಿ ಸೇನಾ ಮುಖ್ಯಸ್ಥ ಹಾಗೂ ಸಿಬಿಐ ನಿರ್ದೇಶಕರಿಗೆ 'SIR' ನೋಟಿಸ್‌

ಅಸಹ್ಯಕರವಾಗಿ ಫೋಟೋ ತೆಗೆಯುವವರಿಗೆ ಹೊಡೆಯಿರಿ: ಶರ್ಟ್ ಬಿಚ್ಚಿ ಪಾಪರಾಜಿಗಳ ವಿರುದ್ಧ ಸಲ್ಮಾನ್ ಖಾನ್ ಗರಂ!

ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು, 3 ವಿದ್ಯಾರ್ಥಿಗಳ ಸಾವು! Video