ಮಂಗಳೂರು: ವಿಶ್ವ ಆರೋಗ್ಯ ಸಂಸ್ಥೆ ಹೆಸರಲ್ಲಿ ವಂಚನೆ, ಕಾಶ್ಮೀರಿ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್ 
ರಾಜ್ಯ

ಮಂಗಳೂರು: ವಿಶ್ವ ಆರೋಗ್ಯ ಸಂಸ್ಥೆ ಹೆಸರಲ್ಲಿ ವಂಚನೆ, ಕಾಶ್ಮೀರಿ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್

 ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳ ಸೋಗಿನಲ್ಲಿ ಮಂಗಳೂರು ಪ್ರವೇಸಿಸಿದ್ದ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ಪೋಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವ ಕಾಶ್ಮೀರಿ ವ್ಯಕ್ತಿಯಾದರೆ ಇನ್ನೊಬ್ಬ ಪಂಜಾಬ್ ಮೂಲದವನೆನ್ನಲಾಗಿದೆ. 

ಮಂಗಳೂರು: ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳ ಸೋಗಿನಲ್ಲಿ ಮಂಗಳೂರು ಪ್ರವೇಸಿಸಿದ್ದ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ಪೋಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವ ಕಾಶ್ಮೀರಿ ವ್ಯಕ್ತಿಯಾದರೆ ಇನ್ನೊಬ್ಬ ಪಂಜಾಬ್ ಮೂಲದವನೆನ್ನಲಾಗಿದೆ.

ಬಂಧಿತರನ್ನು ಪಂಜಾಬಿನ ಬಲ್ವೀಂದರ್ ಸಿಂಗ್ (48) ಹಾಗೂ ಕಾಶ್ಮೀರದ ಬಸೀತ್ ಶಾ  ಎಂದು ಗುರುತಿಸಲಾಗಿದೆ. ನಗರದ ಪಿವಿಎಸ್ ವೃತ್ತ ಸಮೀಪ ಪಂಜಾಬ್ ನೊಂದಣಿ ಹೊಂದಿದ್ದ ಕಾರನ್ನು ವಶಕ್ಕೆ ಪಡೆದು ವಿಚಾರಣೆ ಅನ್ಡೆಸಿದ ವೇಳೆ ಈ ವಂಚನೆ ಬೆಳಕು ಕಂಡಿದೆ.

ಪತ್ರಿಕಾಗೋಷ್ಟಿಯಲ್ಲಿ ಈ ಬಗೆಗೆ ಮಾಹಿತಿ ನಿಡಿದ ಮಂಗಳುರು ನಗರ ಪೋಲೀಸ್ ಕಮಿಷನರ್ ಪಿ.ಎಸ್. ಹರ್ಷ "ಆ.17ರಂದು ಖಚಿತ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ್ದು ಬರ್ಕೆ ಠಾಣೆ ಪೋಲೀಸರು ಕಾಶ್ಮೀರದ ಗಂದರ್ಭಾಲ್ ಜಿಲ್ಲೆಯ ಗಂಜೀಪುರ ನಿವಾಸಿ ಬಸೀತ್ ಶಾ  ಹಾಗೂ ಆತನ ಕಾರು ಚಾಲಕ ಬಲ್ವಿಂದರ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಮರುವಶಕ್ಕೆ ಪಡೆಯಲಾಗಿದೆ.

ಬಂಧಿತರು ಕಾರಿನ ಮೇಲೆ ವಿಶ್ವ ಆರೋಗ್ಯ ಸಂಸ್ಥೆ ಎಂದು ಮುದ್ರಿಸಿದ್ದು ಅದೇ ಹೆಸರಲ್ಲಿ ನಕಲಿ ಐಡಿ ಕಾರ್ಡ್ ಹಾಗೂ ಇತರೆ ದಾಖಲೆಗಳನ್ನು ಹೊಂದಿದ್ದರು

ಬಲ್ವಿಂದರ್ ಸಿಂಗ್ ಹೆಸರಲ್ಲಿದ್ದ ಕಾರನ್ನು ಬಸೀತ್ ಶಾ ಎರಡು ವರ್ಷಗಳಿಂದ ದೇಶದಾದ್ಯಂತ ಸುತ್ತಾಡಲು ಬಳಸುತ್ತಿದ್ದ. ಅಲ್ಲದೆ ಬಲ್ವಿಂದರ್ ಗೆ ಮಾಸಿಕ ಇಪ್ಪತ್ತು ಸಾವಿರ ನೀಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಗಳಿಂದ ದೃಢಪಟ್ಟಿದೆ.

ಇವರು ಹಲವಾರು ರಾಜ್ಯಗಳಲ್ಲಿ ಯುವಕರಿಗೆ ವಂಚಿಸಿದ್ದಾರೆ. ಮ್ಯಾಟ್ರಿಮೊನಿಯಲ್ ವೆಬ್ ತಾಣಗಳ ಮೂಲಕ ಯುವತಿಯರನ್ನೂ ವಂಚಿಸಿದ್ದಾರೆ ಸದ್ಯ ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿದ್ದಂತೆ ಇವರ ಕುರಿತಂತೆ ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ ಸಹ ವಿಚಾರ ತಿಳಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT