ಸಾಂದರ್ಭಿಕ ಚಿತ್ರ 
ರಾಜ್ಯ

ತಮಿಳುನಾಡಿಗೆ ಉಗ್ರರು ಪ್ರವೇಶಿಸಿರುವ ಶಂಕೆ, ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ

ಲಷ್ಕರ್‌ ಇ ತೊಯ್ಬಾ(ಎಲ್‌ಇಟಿ) ಉಗ್ರ ಸಂಘಟನೆಯ ಸದಸ್ಯರು ಅಕ್ರಮವಾಗಿ ತಮಿಳುನಾಡು ಪ್ರವೇಶಿಸಿರುವ ಶಂಕೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಉಡುಪಿ: ಲಷ್ಕರ್‌ ಇ ತೊಯ್ಬಾ(ಎಲ್‌ಇಟಿ) ಉಗ್ರ ಸಂಘಟನೆಯ ಸದಸ್ಯರು ಅಕ್ರಮವಾಗಿ ತಮಿಳುನಾಡು ಪ್ರವೇಶಿಸಿರುವ ಶಂಕೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಪಾಕಿಸ್ತಾನದ ಉಗ್ರನೋರ್ವನನ್ನು ಒಳಗೊಂಡಂತೆ ಆರು ಜನರು ತಮಿಳುನಾಡು ಪ್ರವೇಶಿಸಿರುವ ಮಾಹಿತಿ ಇದೆ. ಕರಾವಳಿ ಕಾವಲು ಪಡೆ ಪೊಲೀಸರು, ಪಾಕಿಸ್ತಾನದ ಉಗ್ರನ ಚಿತ್ರ ಹಾಗೂ ವಿವರಗಳನ್ನೊಳಗೊಂಡಿರುವ ನೋಟಿಸ್‌ಗಳನ್ನು ಮಲ್ಪೆ ಬಂದರು, ಪಡುಕೆರೆ ಬೀಚ್‌ ಪ್ರದೇಶಗಳಲ್ಲಿ ಅಂಟಿಸಿದ್ದಾರೆ. 

ಈ ಉಗ್ರರು ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದು, ಶಂಕಿತರು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಉಗ್ರ ಚಟುವಟಿಕೆಯ ಶಂಕೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ಸ್ಥಳಗಳು, ಬಂದರು ಹಾಗೂ ಪ್ರವಾಸಿ ತಾಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ ಎಂದು ಎಸ್‌ಪಿ ನಿಶಾ ಜೇಮ್ಸ್‌ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!