ಸಾಂದರ್ಭಿಕ ಚಿತ್ರ 
ರಾಜ್ಯ

ತಮಿಳುನಾಡಿಗೆ ಉಗ್ರರು ಪ್ರವೇಶಿಸಿರುವ ಶಂಕೆ, ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ

ಲಷ್ಕರ್‌ ಇ ತೊಯ್ಬಾ(ಎಲ್‌ಇಟಿ) ಉಗ್ರ ಸಂಘಟನೆಯ ಸದಸ್ಯರು ಅಕ್ರಮವಾಗಿ ತಮಿಳುನಾಡು ಪ್ರವೇಶಿಸಿರುವ ಶಂಕೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಉಡುಪಿ: ಲಷ್ಕರ್‌ ಇ ತೊಯ್ಬಾ(ಎಲ್‌ಇಟಿ) ಉಗ್ರ ಸಂಘಟನೆಯ ಸದಸ್ಯರು ಅಕ್ರಮವಾಗಿ ತಮಿಳುನಾಡು ಪ್ರವೇಶಿಸಿರುವ ಶಂಕೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಪಾಕಿಸ್ತಾನದ ಉಗ್ರನೋರ್ವನನ್ನು ಒಳಗೊಂಡಂತೆ ಆರು ಜನರು ತಮಿಳುನಾಡು ಪ್ರವೇಶಿಸಿರುವ ಮಾಹಿತಿ ಇದೆ. ಕರಾವಳಿ ಕಾವಲು ಪಡೆ ಪೊಲೀಸರು, ಪಾಕಿಸ್ತಾನದ ಉಗ್ರನ ಚಿತ್ರ ಹಾಗೂ ವಿವರಗಳನ್ನೊಳಗೊಂಡಿರುವ ನೋಟಿಸ್‌ಗಳನ್ನು ಮಲ್ಪೆ ಬಂದರು, ಪಡುಕೆರೆ ಬೀಚ್‌ ಪ್ರದೇಶಗಳಲ್ಲಿ ಅಂಟಿಸಿದ್ದಾರೆ. 

ಈ ಉಗ್ರರು ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದು, ಶಂಕಿತರು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಉಗ್ರ ಚಟುವಟಿಕೆಯ ಶಂಕೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ಸ್ಥಳಗಳು, ಬಂದರು ಹಾಗೂ ಪ್ರವಾಸಿ ತಾಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ ಎಂದು ಎಸ್‌ಪಿ ನಿಶಾ ಜೇಮ್ಸ್‌ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT