ರಾಜ್ಯ

ಹಿರಿಯ ಪೊಲೀಸ್ ಅಧಿಕಾರಿ ಆರ್ ರಮೇಶ್ ವಿಧಿ ವಶ 

Nagaraja AB

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪೊಲೀಸ್ ಕೇಂದ್ರ ಯೋಜನೆ ಮತ್ತು ಆಧುನೀಕರಣ ವಿಭಾಗದ ಉಪ ಉಪ ಪೊಲೀಸ್ ಮಹಾನಿರೀಕ್ಷಕ ಆರ್ ರಮೇಶ್  ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

2017ರಲ್ಲಿ ಡಿಐಜಿ ಹುದ್ದೆಗೆ ಬಡ್ತಿ ಪಡೆದಿದ್ದ ಅವರು, ಗೃಹ ರಕ್ಷಕ ದಳದ ಉಪ ಕಮಾಂಡೆಂಟ್ ಜನರಲ್ ಆಗಿ ಕಾರ್ಯನಿರ್ವಹಿಸಿ, ನಂತರ ಯೋಜನೆ ಮತ್ತು ಆಧುನೀಕರಣ ವಿಭಾಗದ ಡಿಐಜಿಯಾಗಿ ವರ್ಗಾವಣೆಯಾಗಿದ್ದರು.2005ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಆರ್ ರಮೇಶ್, ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. 

SCROLL FOR NEXT