ಡಿ.ಕೆ.ಶಿವಕುಮಾರ್ 
ರಾಜ್ಯ

ಪ್ರಕರಣವನ್ನು ಕಾನೂನು ರೀತಿ ಮತ್ತು ರಾಜಕೀಯವಾಗಿ ಎದುರಿಸುತ್ತೇನೆ: ಡಿ.ಕೆ.ಶಿವಕುಮಾರ್

ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ.

ಬೆಂಗಳೂರು: ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗೆ ತೆರಳಿ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಶಿವಕುಮಾರ್, ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆತಿಥ್ಯ, ರಕ್ಷಣೆ ನೀಡಿದ್ದಕ್ಕಾಗಿ ನನ್ನ ಮೇಲೆ ಐಟಿ ದಾಳಿ ನಡೆಸಲಾಗಿತ್ತು. ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಕಾಂಗ್ರೆಸ್ಸಿನ ನಿಷ್ಠಾವಂತ ಹಾಗೂ ಸೈನಿಕನಂತೆ ಜವಾಬ್ದಾರಿಯುತ ರಾಜಕಾರಣಿಯಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ನಾನು ನಿರ್ವಹಿಸಿದ್ದೇನೆ. ಅದಕ್ಕಾಗಿ ನನ್ನನ್ನು ಗುರಿಯಾಗಿಸಲಾಗಿದೆ. ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದ್ದು, ಕಾನೂನುಬದ್ಧವಾಗಿ ಮತ್ತು ರಾಜಕೀಯವಾಗಿ ಇದನ್ನು ಎದುರಿಸುತ್ತೇನೆ ಎಂದಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT