ಕೆಆರ್ ಎಸ್ ಗೆ ಬಾಗಿನ ಅರ್ಪಣೆ 
ರಾಜ್ಯ

ಬಾಗಿನದಲ್ಲೂ ಮಲತಾಯಿ ಧೋರಣೆ: ಕೆಆರ್ ಎಸ್ ಗೆ ಮಾತ್ರ ಬಾಗಿನ, ಆಲಮಟ್ಟಿಗೆ ಏಕಿಲ್ಲ?

ಇತ್ತೀಚೆಗೆ ಸುರಿದ ಮಳೆಯಿಂದ ಭರ್ತಿಗೊಂಡಿದ್ದ ಕೆಆರ್ ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಬಾಗಿನ ಅರ್ಪಿಸಿದ್ದಾರೆ, ಆದರೆ  ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ನೀಡದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ವಿಜಯಪುರ:  ಇತ್ತೀಚೆಗೆ ಸುರಿದ ಮಳೆಯಿಂದ ಭರ್ತಿಗೊಂಡಿದ್ದ ಕೆಆರ್ ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಬಾಗಿನ ಅರ್ಪಿಸಿದ್ದಾರೆ, ಆದರೆ  ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ನೀಡದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬಾಗಲಕೋಟೆಯಲ್ಲಿರುವ ಆಲಮಟ್ಟಿ, ರಾಜ್ಯದ ಅತಿ ದೊಡ್ಡ ಜಲಾಶಯ, ಮಳೆಯಿಂದಾಗಿ ಈ ಜಲಾಶಯ ಕೂಡ ತುಂಬಿ ತುಳುಕುತ್ತಿದೆ,.  ರಾಜ್ಯ ಸರ್ಕಾರ ಕೇವಲ ಕೆಆರ್ ಎಸ್ ಗೆ ಮಾತ್ರ ಬಾಗಿನ ಅರ್ಪಿಸಿದೆ. ಆಲಮಟ್ಟಿ ಜಲಾಶಯಕ್ಕೆ ಏಕಿಲ್ಲ ಎಂದು ಈ ಭಾಗದ ರೈತರು ಪ್ರಶ್ನಿಸಿದ್ದಾರೆ.

ಕೆಆರ್ ಎಸ್ ಗಿಂತ ಆಲಮಟ್ಟಿ ದೊಡ್ಡ ಜಲಾಶಯವಾಗಿದೆ, ಕೇವಲ ಬಿಜೆಪಿ ಸರ್ಕಾರ ಮಾತ್ರವಲ್ಲ, ಇದಕ್ಕೂ ಹಿಂದಿದ್ದ ಸರ್ಕಾರಗಳು ಕೂಡ ಇದೇ ರೀತಿ ತಾರತಮ್ಯ ಮಾಡಿಕೊಂಡು ಬಂದಿವೆ, ಬಹಳ ಹಿಂದಿನಿಂದಲೂ ಮಲತಾಯಿ ಧೋರಣೆ ನಡೆಯುತ್ತಿದೆ ಎಂದು ಕರ್ನಾಟರ ರೈತ ಸಂಘದ ಕಾರ್ಯದರ್ಶಿ ಆರವಿಂದ್ ಕುಲಕರ್ಣಿ ಆರೋಪಿಸಿದ್ದಾರೆ. ಜೊತೆಗೆ ತುಂಗಭದ್ರಾ ಜಲಾಶಯ ಕೂಡ ತುಂಬಿದ್ದು, ಸರ್ಕಾರ ಇದನ್ನು ನಿರ್ಲಕ್ಷ್ಯಿಸಿದೆ ಎಂದು ಈ ಭಾಗದ ರೈತರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT