ರೋಹನ್ ಗೌಡ 
ರಾಜ್ಯ

ಅಕ್ರಮ ಪಬ್ ಮೇಲೆ ಸಿಸಿಬಿ ದಾಳಿ: ಸ್ಯಾಂಡಲ್ ವುಡ್ ನಟ ಸೇರಿ ಮೂವರು ಅರೆಸ್ಟ್!

ಲೇ ಮರಿಡಿಯನ್ ಹೋಟೆಲ್ ನಲ್ಲಿರುವ 'ಶುಗರ್ ಫ್ಯಾಕ್ಟರಿ' ಎಂಬ ಹೆಸರಿನ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಅಬಕಾರಿ ಹಾಗೂ ಡಿಸ್ಕೋಥೆಕ್ ನಿಯಮಗಳನ್ನು ಉಲ್ಲಂಘಿಸಿ ಬಾರ್ ಹಾಗೂ ರೆಸ್ಟೋರೆಂಟ್ ನಡೆಸಿದ್ದ ಸ್ಯಾಂಡಲ್ ವುಡ್ ನಟ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ 

ಬೆಂಗಳೂರು: ಲೇ ಮರಿಡಿಯನ್ ಹೋಟೆಲ್ ನಲ್ಲಿರುವ 'ಶುಗರ್ ಫ್ಯಾಕ್ಟರಿ' ಎಂಬ ಹೆಸರಿನ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಅಬಕಾರಿ ಹಾಗೂ ಡಿಸ್ಕೋಥೆಕ್ ನಿಯಮಗಳನ್ನು ಉಲ್ಲಂಘಿಸಿ ಬಾರ್ ಹಾಗೂ ರೆಸ್ಟೋರೆಂಟ್ ನಡೆಸಿದ್ದ ಸ್ಯಾಂಡಲ್ ವುಡ್ ನಟ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಸ್ಯಾಂಡಲ್ ವುಡ್ ನಟ ಹಾಗೂ ಬಿಗ್ ಬಾಸ್ ಸ್ಫರ್ಧಿಯಾಗಿದ್ದ ರೋಹನ್ ಗೌಡ (37) ಸೇರಿ ಶೇಷಾದ್ರಿಪುರಂನ ನವೀದ್ (29) ಹಾಗೂ ಮತ್ತೀಕೆರೆಯ ಶಶಿಕುಮಾರ್ (41) ಬಂಧಿತರು.

ಲೇ ಮರಿಡಿಯನ್ ಹೋಟೆಲ್ ನ  ನೆಲಮಹಡಿಯ ಶುಗರ್ ಫ್ಯಾಕ್ಟರಿ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಅಬಕಾರಿ ಮತ್ತು ಡಿಸ್ಕೋಥೆಕ್ ನಿಮಯಗಳನ್ನು ಉಲ್ಲಂಘಿಸಿ, ಸಾರ್ವಜನಿಕರಿಗೆ ಮದ್ಯ ಹಾಗೂ ಊಟ ಸರಬರಾಜು ಮಾಡಿ ಅಕ್ರಮವಾಗಿ ಹಣ ಸಂಪಾದಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ಕೈಗೊಂಡಿದ್ದರು

ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ, ಸೌಂಡ್ ಸಿಸ್ಟಂ, ಮ್ಯೂಸಿಕ್ ಕಂಟ್ರೋಲರ್, ಮದ್ಯದ ಬಾಟಲ್, ಸ್ವೈಪಿಂಗ್ ಮಿಷಿನ್ ಹಾಗೂ 2,100 ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮತ್ತು ಲೀ ಮೆರಿಡಿಯನ್ ಹೋಟೆಲ್ ಅಧ್ಯಕ್ಷರಾದ ಮ್ಯಾಕ್ ಚಾರ್ಲ್ಸ್‌ ಮತ್ತು ಎಂಎಸ್ ರೆಡ್ಡಿ ಸೇರಿಕೊಂಡು ಅಬಕಾರಿ ಮತ್ತು ಕಂಟ್ರೋಲಿಂಗ್ ಆಫ್ ಪ್ಲೇಸ್ ಆಫ್ ಪಬ್ಲಿಕ್ ಎಂಟರ್ ಟೆನ್ಮೆಂಟ್ ನಿಯಮಗಳನ್ನು ಉಲ್ಲಂಘಿಸಿ, ಅವಧಿ ಮೀರಿ ಗ್ರಾಹಕರಿಗೆ ಅಲ್ಲಿಯೇ ಮದ್ಯ ಸೇವನೆಗೆ ಅವಕಾಶ ನೀಡಿದ್ದರು. ಅಲ್ಲದೇ, ಧ್ವನಿವರ್ಧಕವನ್ನು ಉಪಯೋಗಿಸಿ ಅಕ್ಕ ಪಕ್ಕದ ಸಾರ್ವಜನಿಕರಿಗೆ ಶಬ್ದ ಮಾಲಿನ್ಯ ಉಂಟು ಮಾಡಿ ತೊಂದರೆ ನೀಡುತ್ತಿದ್ದರು. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ತನಿಖೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ

ನಗರ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹಾಗೂ ಉಪ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಮಾರ್ಗದರ್ಶನದಲ್ಲಿ ಮಹಿಳೆ ಮತ್ತು ಮಾದಕ ದ್ರವ್ಯ ದಳದ ಸಹಾಯಕ ಪೊಲೀಸ್ ಆಯುಕ್ತ ಹೆಚ್.ಎನ್.ವೆಂಕಟೇಶ್ ಪ್ರಸನ್ನ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT