ಯುವಕ ಆತ್ಮಹತ್ಯೆ 
ರಾಜ್ಯ

ಬೆಂಗಳೂರು: ರಿಯಾಲಿಟಿ ಶೋ ನಲ್ಲಿ ಸಿಗದ ಅವಕಾಶ; ನೊಂದ ಯುವಕ ಆತ್ಮಹತ್ಯೆ 

ಖಾಸಗಿ ಚಾನೆಲ್ ನಡೆಸುವ ರಿಯಾಲಿಟಿ ಶೋನಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ.

ಬೆಂಗಳೂರು: ಖಾಸಗಿ ಚಾನೆಲ್ ನಡೆಸುವ ರಿಯಾಲಿಟಿ ಶೋನಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ.

ಹೊಸಕೋಟೆ ತಾಲೂಕಿನ ಕಂಬಳಿಪುರ ಗ್ರಾಮದ ಕಿರಣ್ ಮೃತ ದುರ್ದೈವಿ. ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಟಿಕ್ ಟಾಕ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ.

ಕಿರಣ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಖಾಸಗಿ ಚಾನೆಲ್ ನಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿ ಹೀರೋ ಆಗಬೇಕು ಎಂದು ಕನಸು ಕಂಡಿದ್ದನು. ಅಲ್ಲದೆ ಜೊತೆಗೆ ಅದಕ್ಕಾಗಿ ಸಾಕಷ್ಟು ತಯಾರಿ ಕೂಡ ನಡೆಸಿದ್ದನು. 

ಈ ಬಾರಿ ನನಗೂ ಒಂದು ಚಾನ್ಸ್ ಸಿಕ್ಕಿಯೇ ಸಿಗುತ್ತದೆ ಎಂದು ಮಧ್ಯವರ್ತಿಗಳ ಸಹಾಯದಿಂದ ಕಾದು ಕುಳಿತಿದ್ದನು. ಆದರೆ ಕೊನೆ ಕ್ಷಣದಲ್ಲಿ ಚಾನ್ಸ್ ಸಿಗಲಿಲ್ಲ ಎಂದು ಮಧ್ಯವರ್ತಿಗಳು ಕೈ ಎತ್ತಿದ್ದರು. ಇದರಿಂದ ಮನನೊಂದ ಯುವಕ, ಬುಧವಾರ ರಾತ್ರಿ ಹೊಸಕೋಟೆಗೆ ಬಂದು ಲಾಡ್ಜ್ ನಲ್ಲಿ ರೂಂ ಬಾಡಿಗೆಗೆ ಪಡೆದು ಟಿಕ್‍ಟಾಕ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಿಯಾಲಿಟಿ ಶೋ ನಲ್ಲಿ ಏನಾದರೂ ಮಾಡಿ ಚಾನ್ಸ್ ತಗೆದುಕೊಳ್ಳಬೇಕು ಎಂದು ಕಿರಣ್ ಅಂದುಕೊಂಡಿದ್ದನು. ಇದೇ ವೇಳೆ ರಿಯಾಲಿಟಿ ಶೋನಲ್ಲಿ ಚಾನ್ಸ್ ಕೊಡಿಸುತ್ತೇನೆ ಎಂದು ವಂಚಕರು ಹೇಳಿದ ಮಾತು ನಂಬಿ ಒಂದು ಲಕ್ಷಕ್ಕೂ ಅಧಿಕ ಹಣವನ್ನು ನೀಡಿದ್ದಾನೆ.

ಆದರೆ ಕಿರಣ್‍ನಿಂದ ಚಾನ್ಸ್ ಕೊಡಿಸುವುದಾಗಿ ಹಣ ಪಡೆದವರು ಕೊನೆ ಕ್ಷಣದವರೆಗೂ ಚಾನ್ಸ್ ಸಿಕ್ಕಿದೆ ಎಂದು ಹೇಳಿದ್ದರು. ಬಳಿಕ ಈ ಬಾರಿ ನಿನಗೆ ಚಾನ್ಸ್ ಸಿಕ್ಕಿಲ್ಲ ಹಣ ವಾಪಸ್ ಕೊಡುತ್ತೇನೆ ಎಂದು ಹೇಳಿದ್ದರು. ಇದರಿಂದ ಮನನೊಂದ ಕಿರಣ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT