ಸಿಲಿಕಾನ್ ಸಿಟಿ ಪೋಲೀಸರ ಕಾರ್ಯಾಚರಣೆ-ಬಾಲಕನ ಅಪಹರಿಸಿದ್ದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು 
ರಾಜ್ಯ

ಸಿಲಿಕಾನ್ ಸಿಟಿ ಪೋಲೀಸರ ಕಾರ್ಯಾಚರಣೆ-ಬಾಲಕನ ಅಪಹರಿಸಿದ್ದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು

ಅಪಹರಣಕಾರನೋರ್ವನ ಮೇಲೆ ಪೊಲೀಸರು ಗುಂಡಿನ ದಾಳಿ‌ ನಡೆಸಿ, ಬಾಲಕನನ್ನು ರಕ್ಷಿಸಿರುವ ಘಟನೆ ನಗರದ ಹೆಣ್ಣೂರು ಬಳಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ.

ಬೆಂಗಳೂರು: ಅಪಹರಣಕಾರನೋರ್ವನ ಮೇಲೆ ಪೊಲೀಸರು ಗುಂಡಿನ ದಾಳಿ‌ ನಡೆಸಿ, ಬಾಲಕನನ್ನು ರಕ್ಷಿಸಿರುವ ಘಟನೆ ನಗರದ ಹೆಣ್ಣೂರು ಬಳಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ.

ಆರೋಪಿ ಮುಬಾರಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಶನಿವಾರ ಮಧ್ಯಾಹ್ನ ಆರೋಪಿಗಳು ನಗರದ ಹೊಟೇಲ್ ಮಾಲೀಕನೋರ್ವನ 13 ವರ್ಷದ ಮಗನನ್ನು ಚಾಕು ತೋರಿಸಿ ಆಟೋದಲ್ಲಿ ಅಪಹರಿಸಿದ್ದರು. ನಂತರ ಬಾಲಕ ಮೊಬೈಲ್ ನಿಂದಲೇ ಆತನ ಪೋಷಕರಿಗೆ ಕರೆ ಮಾಡಿ, 50 ಲಕ್ಷ ರೂ ಬೇಡಿಕೆ ಇಟ್ಟಿದ್ದರು. ಇತ್ತ ಪೋಷಕರು ಸಂಜೆಯಾದರೂ ಬಾಲಕ ಮನೆಗೆ ವಾಪಾಸಾಗದ್ದನ್ನು ಕಂಡು ಬಾಣಸವಾಡಿ ಪೋಲೀಸರಲ್ಲಿ ದೂರು ನೀಡಿದ್ದಾರೆ. ಅಪಹರಣಕಾರರಿಂದ ಕರೆ ಸ್ವೀಕರಿಸಿದ ಮಾಹಿತಿ ಪಡೆದ ಪೋಲೀಸರು ಡಿಸಿಪಿ ಡಾ.ಶರಣಪ್ಪ ಅವರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಮತ್ತು ಬಾಣಸವಾಡಿ ಇನ್ಸ್‍ಪೆಕ್ಟರ್‍ಗಳ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಜಾಲ ಹೆಣೆದಿದ್ದಾರೆ.

ಆರೋಪಿಗಳು ಬಾಲಕನನ್ನು ವಾಹನದಲ್ಲಿ ಕುಳ್ಳರಿಸಿಕೊಂಡು ನಗರವನ್ನೆಲ್ಲಾ ಸುತ್ತಿದ್ದಾರೆ ಎನ್ನುವ ಮಾಹಿತಿ ಅಲ್ಲದೆ ಸ್ವಲ್ಪ ಸಮಯದಲ್ಲೇ ಹೆಣ್ಣೂರು ವ್ಯಾಪ್ತಿಯ ನಾರಾಯಣಪುರಕ್ಕೆ ಆಗಮಿಸುವ ಮಾಹಿತಿ ಪಡೆದ ಪೋಲೀಸರು ಜಾಗೃತರಾಗಿದ್ದರು. ಆರೋಪಿಗಳ ಬಂಧನಕ್ಕೆ ಮುಂದಾದ ಪೋಲೀಸರ ಮೇಲೆ ಆರೋಪಿ ಥಣಿಸಂದ್ರದ ಮುಬಾರಕ್ (28)  ಹಲ್ಲೆ ನಡೆಸಿದ್ದಾನೆ.ಆಗ ಡ್‍ಕಾನ್‍ಸ್ಟೆಬಲ್ ರೇಣುಕಾನಾಯಕ್ ಗಾಯಗೊಂಡಿದ್ದಾರೆ. ಆಗ ಆತ್ಮರಕ್ಷಣೆಗಾಗಿ ಪೋಲೀಸರು ಮುಬಾರಕ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಆರೋಪಿ ನೀಡಿದ ಸುಳಿವಿನ ಮೇಲೆ ದುಷ್ಕರ್ಮಿಗಳ ತಂಡದ ಇನ್ನಿಬ್ಬರು ಸದಸ್ಯರನ್ನು ( ಥಣಿಸಂದ್ರದ ಅಯಾಝ್ ಹಾಗೂ ಕಮ್ಮನಹಳ್ಳಿಯ ಮೊಹಿನ್‍ನನ್ನು (29)) ಬಂಧಿಸಿದ್ದಾರೆ. ಅದರಲ್ಲಿ ಓರ್ವನು ಬಾಲಕನ ಸಂಬಂಧಿ ಎಂದೂ ಪತ್ತೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT