ಪೊಲೀಸ್ ಆಯುಕ್ತ ಭಾಸ್ಕರ್ ರಾವ್ 
ರಾಜ್ಯ

ಉಪ ಚುನಾವಣೆ: ಮತದಾನಕ್ಕೆ ಅಗತ್ಯ ಭದ್ರತೆ, ನಾಳೆಯಿಂದ ಡಿ.5ರವರೆಗೆ ನಗರದಲ್ಲಿ ನಿಷೇಧಾಜ್ಞೆ- ಭಾಸ್ಕರ್ ರಾವ್

ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇದೇ 5ರಂದು ನಡೆಯಲಿರುವ ಉಪಚುನಾವಣೆಗೆ ಎಲ್ಲಾ ಅಗತ್ಯ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆ ಸಂಜೆ 6 ಗಂಟೆಯಿಂದ ಡಿಸೆಂಬರ್ 5ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸರ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇದೇ 5ರಂದು ನಡೆಯಲಿರುವ ಉಪಚುನಾವಣೆಗೆ ಎಲ್ಲಾ ಅಗತ್ಯ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆ ಸಂಜೆ 6 ಗಂಟೆಯಿಂದ ಡಿಸೆಂಬರ್ 5ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸರ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಭಾರಿ  ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ 28 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಚುನಾವಣಾ ಭದ್ರತೆಗಾಗಿ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 7 ಮಂದಿ ಡಿಸಿಪಿಗಳು, 14 ಮಂದಿ ಎಸಿಪಿಗಳು, 30 ಪೊಲೀಸ್ ಇನ್ಸ್‌ ಪೆಕ್ಟರ್ ಗಳು, 68 ಪಿಎಸ್‌ಐಗಳು, 160 ಎಎಸ್‌ಐ ಗಳು 1666  ಮುಖ್ಯ ಪೇದೆ, ಪೇದೆಗಳನ್ನು ನಿಯೋಜಿಸಲಾಗಿದೆ. ಇವರ ಜೊತೆಗೆ 951 ಮಂದಿ ಗೃಹ ರಕ್ಷಕ ದಳದ ಸಿಬ್ಬಂದಿ ಭದ್ರತೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!