ಚಾಮರಾಜನಗರ: ಬಟ್ಟೆ ಒಣಗಿಸಲು ತೆರಳಿದ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಮಹಿಳೆಯರು ಅಸ್ವಸ್ಥಗೊಂಡಿರುವ ಘಟನೆ ಯಳಂದೂರು ತಾಲೂಕಿನ ಕಂದಹಳ್ಳಿಯಲ್ಲಿ ನಡೆದಿದೆ.
ಕುಮಾರಿ, ಸುಮಾ, ನಾಗರತ್ನ ಎಂಬ ಮೂವರು ಮಹಿಳೆಯರು ವಿದ್ಯುತ್ ಪ್ರವಹಿಸಿ ಅಸ್ವಸ್ತಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯ ಹಿಂದಿನ ಕೊಟ್ಟಿಗೆಯ ಮುಳ್ಳುತಂತಿಗೆ ಬಟ್ಟೆ ಒಣ ಹಾಕುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ.
ತಾಯಿ ಕುಮಾರಿ, ಹಾಗೂ ಮಗಳಾದ ಸುಮಾ ಅವರ ಸ್ಥಿತಿ ಗಂಭೀರವಾಗಿದ್ದು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಯಳಂದೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- ಗೂಳಿಪುರ ನಂದೀಶ ಎಂ