ಗೋಪಿನಾಥಂ ಪ್ರಾಥಮಿಕ ಶಾಲೆ 
ರಾಜ್ಯ

ಶಿಕ್ಷಣ ಸಚಿವರ ವಾಸ್ತವ್ಯದ ಎಫೆಕ್ಟ್: ಗೋಪಿನಾಥಂ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಪ್ರಾರಂಭಕ್ಕೆ ಅನುಮತಿ

ಚಾಮರಾಜನಗರ ಜಿಲ್ಲೆಯ ಗೋಪಿನಾಥಂ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಪ್ರಾರಂಭಕ್ಕೆ ಸರ್ಕಾರ ಅನುಮತಿ ನೀಡಿದೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗೋಪಿನಾಥಂ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಪ್ರಾರಂಭಕ್ಕೆ ಸರ್ಕಾರ ಅನುಮತಿ ನೀಡಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 4ನೇ ತರಗತಿಯವರೆಗೆ ಕನ್ನಡ ಮಾಧ್ಯಮವನ್ನು ಆರಂಭಿಸಬೇಕೆಂಬ ಅಲ್ಲಿನ ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರ ಬಹುದಿನಗಳ ಬೇಡಿಕೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್‍ಕುಮಾರ್ ಅವರು ಈಡೇರಿಸಿದ್ದಾರೆ. ಶಿಕ್ಷಣ ಸಚಿವರ ಸೂಚನೆಯಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ನಿರ್ದೇಶಕರು 2020-21ನೇ ಸಾಲಿನಿಂದ ಗೋಪಿನಾಥಂ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಪ್ರಾರಂಭಿಸಲು ಅನುಮತಿ ನೀಡಿದ್ದಾರೆ.

 ಕಳೆದ ನವೆಂಬರ್ 18ರಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್‍ಕುಮಾರ್ ರವರು ಗೋಪಿನಾಥಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರ ಜೊತೆ ಸಂವಾದ ನಡೆಸಿದ ಸಂದರ್ಭದಲ್ಲಿ ಪ್ರಸ್ತುತ 1ರಿಂದ 4ನೇ ತರಗತಿವರೆಗೆ ತಮಿಳು ಮಾಧ್ಯಮದಲ್ಲಿ ಕಲಿಯಲು ಅವಕಾಶವಿದೆ. 1ರಿಂದ 4ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿಯಲು ಅವಕಾಶ ಕಲ್ಪಿಸುವಂತೆ ಸಚಿವರಿಗೆ ಮನವಿ ಮಾಡಿದ್ದರು. 

ಈ ಹಿನ್ನಲೆಯಲ್ಲಿ ಸದರಿ ಶಾಲೆಯಲ್ಲಿ 2020-21ನೇ ಸಾಲಿಗೆ 1ರಿಂದ 4ನೇ ತರಗತಿವರೆಗೆ ಕನ್ನಡ ಮಾಧ್ಯಮ ಆರಂಭಿಸಲು ಅನುಮತಿ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. 

ಶಾಲೆಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಅಗತ್ಯಕ್ಕೆ ತಕ್ಕಂತೆ ತರಗತಿ ಕೊಠಡಿಗಳನ್ನು ವ್ಯವಸ್ಥೆಗೊಳಿಸಿಕೊಳ್ಳುವುದು, ಕನ್ನಡ ಮಾಧ್ಯಮದಲ್ಲಿ ಬೋಧಿಸಲು ಅರ್ಹ ಶಿಕ್ಷಕರು ಇರುವಂತೆ ಅಗತ್ಯವಿದ್ದಲ್ಲಿ ನಿಯೋಜನೆಗೆ ಕ್ರಮ, ಸದರಿ ಶಾಲೆಯಲ್ಲಿ ಈಗಾಗಲೇ ನಡೆಯುತ್ತಿರುವ ತರಗತಿಗಳ ಕೊಠಡಿ, ಕಟ್ಟಡ ಮೂಲಸೌಕರ್ಯಗಳಲ್ಲಿಯೆ ಕನ್ನಡ ಮಾಧ್ಯಮ 1ರಿಂದ 4ನೇ ತರಗತಿಗಳ ವಿಭಾಗಗಳನ್ನು ನಡೆಸುವುದು, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕನ್ನಡ ಮಾಧ್ಯಮ ಪಠ್ಯಪುಸ್ತಕಗಳ ಬೇಡಿಕೆ ಪಟ್ಟಿಯನ್ನು ಸಕಾಲದಲ್ಲಿ ಪಠ್ಯಪುಸ್ತಕ ಸೊಸೈಟಿಗೆ ಸಲ್ಲಿಕೆ, ಸಮುದಾಯದ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಕ್ರಮ ವಹಿಸಿ ಎಲ್ಲಾ ಅರ್ಹ ವಯಸ್ಸಿನ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಂಡು ಬೋಧಿಸಲು ಎಲ್ಲಾ ಅಗತ್ಯ ಕ್ರಮ ವಹಿಸಬೇಕು. ಈ ಎಲ್ಲಾ ಅರ್ಹತಾ ಅಂಶಗಳನ್ನು ಪೂರೈಸಿರುವುದನ್ನು ಖಾತರಿಪಡಿಸಿಕೊಂಡು 1ರಿಂದ 4ನೇ ತರಗತಿವರೆಗೆ ಕನ್ನಡ ಮಾಧ್ಯಮವನ್ನು ಪ್ರಾರಂಭಿಸಲು ಅನುಮತಿ ನೀಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

-ಗೂಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT