ರಾಜ್ಯ

ಮಾಜಿ ಸಚಿವ ಎಚ್.ಡಿ ರೇವಣ್ಣ ಪುತ್ರ ಸೂರಜ್ ವಿರುದ್ಧ ಎಫ್ ಐ ಆರ್ 

Shilpa D

ಹಾಸನ:  ಮಾಜಿ ಸಚಿವ ರೇವಣ್ಣ ಪುತ್ರ ಸೂರಜ್​ ರೇವಣ್ಣ ವಿರುದ್ಧ ಎಫ್​ಐಆರ್​ ದಾಖಲಾಗಿದೆ. 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸಂತೋಷ್​​ ಎಂಬುವರ ತೋಟದ ಮನೆಯಿಂದ ಕೆ.ಆರ್​.ಪೇಟೆ ಉಪಚುನಾವಣೆಗೆ ಹಣ ಸಾಗಿಸುತ್ತಿದ್ದಾರೆಂದು, ಮಾಜಿ ಸಚಿವ ರೇವಣ್ಣ ಪುತ್ರ ಸೂರಜ್​ ರೇವಣ್ಣ ಬೆಂಬಲಿಗರು ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಕೆ,ಆರ್ ಪೇಟೆ  ಗಡಿ ಭಾಗದ ನಂಬಿಹಳ್ಳಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್​ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಹಿನ್ನೆಲೆಯಲ್ಲಿ ಈ ಎಫ್ ಐ ಆರ್ ದಾಖಲಾಗಿದೆ.

ಸೂರಜ್​ ರೇವಣ್ಣ ವಿರುದ್ಧ ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಮಾಡಿದ್ದಾರೆ ಎಂದು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಸೂರಜ್​ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ.

SCROLL FOR NEXT