ವರದಿಗಾರನ ಮೇಲೆ ಪೊಲೀಸ್ ದಬ್ಬಾಳಿಕೆ 
ರಾಜ್ಯ

'ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿಗಾರನ ಮೇಲೆ ಪೊಲೀಸ್ ದಬ್ಬಾಳಿಕೆ!

ಕರ್ನಾಟಕ ಉಪಚುನಾವಣೆ ಮತದಾನ ಅಂತಿಮ ಹಂತ ತಲುಪಿರುವಂತೆಯೇ ಇತ್ತ ಕೆಆರ್ ಪುರದಲ್ಲಿ ಅಮಾಯಕರ ಮೇಲೆ ಪೊಲೀಸರ ದಬ್ಬಾಳಿಕೆಯ ಕುರಿತು ವರದಿಯಾಗಿದೆ.

ಬೆಂಗಳೂರು: ಕರ್ನಾಟಕ ಉಪಚುನಾವಣೆ ಮತದಾನ ಅಂತಿಮ ಹಂತ ತಲುಪಿರುವಂತೆಯೇ ಇತ್ತ ಕೆಆರ್ ಪುರದಲ್ಲಿ ಅಮಾಯಕರ ಮೇಲೆ ಪೊಲೀಸರ ದಬ್ಬಾಳಿಕೆಯ ಕುರಿತು ವರದಿಯಾಗಿದೆ.

ಬೆಂಗಳೂರಿನ ಕೆಆರ್ ಪುರಂನಲ್ಲಿ ಮತದಾನದ ಜಾಗೃತಿ ಮೂಡಿಸುತ್ತಿದ್ದ ಕಾರ್ಯಕರ್ತನ ಮೇಲೆ ಎಸಿಪಿ ಕೃಷ್ಣಪ್ಪ ಎಂಬುವವರು ದಬ್ಬಾಳಿಕೆ ನಡೆಸಿದ್ದು, ಇದನ್ನು ಚಿತ್ರೀಕರಿಸುತ್ತಿದ್ದ 'ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿಗಾರನ ಮೇಲೆಯೂ ಹಲ್ಲೆ ಮಾಡಿದ್ದಾರೆ.

ಕೆಆರ್ ಪುರಂನಲ್ಲಿ ಕಾರ್ಯಕರ್ತನೋರ್ವ ಮತದಾನದ ಜಾಗೃತಿ ಮೂಡಿಸುತ್ತಿದ್ದ. ಈ ವೇಳೆ ಹೊಯ್ಸಳ ವಾಹನದಲ್ಲಿ ಅಲ್ಲಿಗೆ ಆಗಮಿಸಿದ ಎಸಿಪಿ ಕೃಷ್ಣಪ್ಪ, ಕಾರ್ಯಕರ್ತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಮಾತ್ರವಲ್ಲದೇ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬಳಿಕ ಅಲ್ಲಿಂದ ಬಲವಂತವಾಗಿ ಆತನನ್ನು ಕಳುಹಿಸುವ ಯತ್ನ ಮಾಡಲಾಗಿದ್ದು, ಇವಿಷ್ಟೂ ಘಟನಾವಳಿಗಳನ್ನು ಅಲ್ಲಿಯೇ ಚಿತ್ರೀಕರಿಸುತ್ತಿದ್ದ 'ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿಗಾರನನ್ನು ನೋಡಿದ ಎಸಿಪಿ ಕೃಷ್ಣಪ್ಪ ಕೂಡಲೇ ಅವರ ಮೇಲೂ ಹಲ್ಲೆ ಮಾಡಿದ್ದಾರೆ.

ಎಸಿಪಿ ಕೃಷ್ಣಪ್ಪ ಅವರ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಕರ್ನಾಟಕ ಕೂಡ ಉತ್ತರ ಪ್ರದೇಶವಾಗುತ್ತಿದೆ. ಪೊಲೀಸ ದಬ್ಬಾಳಿಕೆ ಮಿತಿ ಮೀರುತ್ತಿದ್ದು, ಪೊಲೀಸರು ನಡುರಸ್ತೆಯಲ್ಲೇ ಅಮಾಯಕರನ್ನು ಥಳಿಸುವ ಮಟ್ಟಕ್ಕೆ ಇಳಿದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT