ಚಿರತೆ ಸೆರೆ 
ರಾಜ್ಯ

ಉಡುಪಿ: ಉಪ ದ್ರವ ಕೊಡುತ್ತಿದ್ದ ಚಿರತೆ ಕೊನೆಗೂ ಬಲೆಗೆ ಬಿತ್ತು

ಜನರಿಗೆ ತೊಂದರೆ ಕೊಡುತ್ತಿದ್ದ ಗಂಡು  ಚಿರತೆಯನ್ನು ಬೋನಿಗೆ ಕೆಡುವಲ್ಲಿ  ಅರಣ್ಯ ಸಿಬ್ಬಂದಿ ಕೊನೆಗೂ   ಯಶಸ್ವಿಯಾಗಿದೆ.

ಉಡುಪಿ: ಜನರಿಗೆ ತೊಂದರೆ ಕೊಡುತ್ತಿದ್ದ ಗಂಡು  ಚಿರತೆಯನ್ನು ಬೋನಿಗೆ ಕೆಡುವಲ್ಲಿ  ಅರಣ್ಯ ಸಿಬ್ಬಂದಿ ಕೊನೆಗೂ   ಯಶಸ್ವಿಯಾಗಿದೆ.

ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮೊಲಹಳ್ಳಿ ಬಳಿಯ ಯಾದಡಿ-ಮತ್ಯಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡಟ್ಟು ಪರಿಸರದ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ ಮತ್ತೊಂದು ಗಂಡು ಚಿರತೆಯನ್ನು ಕೇವಲ ಹತ್ತು ದಿನಗಳೊಳಗೆ ಸೆರೆ ಹಿಡುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ಈ ಪ್ರದೇಶದಲ್ಲಿ ಚಿರತೆಗಳು ಓಡಾಟ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ಗುಡ್ಡಟ್ಟುವಿನ ಮನೆಯೊಂದರ ಬಳಿ ಬೋನು ಇರಿಸಿ ನವೆಂಬರ್ 26 ರಂದು ಗಂಡು ಚಿರತೆಯೊಂದನ್ನು ಸೆರೆ ಹಿಡಿಯಲಾಗಿತ್ತು. ಇದೇ ಸ್ಥಳದಲ್ಲಿ ಇನ್ನೊಂದು ಚಿರತೆ ಇರುವ ಬಗ್ಗೆ ಸ್ಥಳೀಯರು ನೀಡಿದ ದೂರಿನ ಹಿನ್ನೆಲೆಯಲ್ಲಿ  ಅದೇ ಜಾಗದಲ್ಲಿ ಬೋನನ್ನು ಇರಿಸಲಾಗಿತ್ತು. 

ಡಿಸೆಂಬರ್ 6 ರಂದು ರಾತ್ರಿ ವೇಳೆ ನಾಯಿ ಬೇಟೆಗೆ ಬಂದ ಚಿರತೆ ಈ ಬೋನಿನೊಳಗೆ ಸೆರೆಯಾಗಿದೆ. ಇದರಿಂದಾಗಿ  ಗುಡ್ಡಟುನಲ್ಲಿ  ಚಿರತೆ ಬಲೆಗೆ  ಸಿಕ್ಕಿಬಿದ್ದಿದ್ದು ಸದ್ಯ ಜನರು ನೆಮ್ಮದಿ ನಿಟ್ಟಿಸಿರು ಬಿಡುವಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT