ಹಿಂದೂಗಳಿಗೆ ಪ್ರವಾಸ ವಿತರಣೆ: ಬಾವೈಕ್ಯತೆ ಮೆರೆದ ಮುಸ್ಲಿಮರು 
ರಾಜ್ಯ

ಹಿಂದೂಗಳಿಗೆ ಪ್ರಸಾದ ವಿತರಣೆ: ಭಾವೈಕ್ಯತೆ ಮೆರೆದ ಮುಸ್ಲಿಮರು

ಕೇವಲ ಹೇಳುವುದಕ್ಕಷ್ಟೇ ಅಲ್ಲ ಇಲ್ಲಿನ ಮುಸ್ಲಿಮರು ತಮ್ಮ ನಡವಳಿಕೆಯಲ್ಲಿಯೂ ಭಾವೈಕ್ಯತೆ ಮೆರೆದಿದ್ದಾರೆ. ಹನುಮ ಮಾಲಾದಾರಿಗಳು ಹಾಗೂ ಅಯ್ಯಪ್ಪ ಮಾಲಾದಾರಿಗಳಿಗೆ ಪ್ರಸಾದ ವಿತರಿಸುವ ಮೂಲಕ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಪಟ್ಟಣದ ರಾಜಭಾಗ ಸವಾರ್ ದರ್ಗಾದಲ್ಲಿರುವ ಮುಸ್ಲಿಮರು ಭ್ರಾತೃತ್ವ ಸಾರಿದ್ದಾರೆ. 

ಹೊಸಪೇಟೆ: ಕೇವಲ ಹೇಳುವುದಕ್ಕಷ್ಟೇ ಅಲ್ಲ ಇಲ್ಲಿನ ಮುಸ್ಲಿಮರು ತಮ್ಮ ನಡವಳಿಕೆಯಲ್ಲಿಯೂ ಭಾವೈಕ್ಯತೆ ಮೆರೆದಿದ್ದಾರೆ. ಹನುಮ ಮಾಲಾದಾರಿಗಳು ಹಾಗೂ ಅಯ್ಯಪ್ಪ ಮಾಲಾದಾರಿಗಳಿಗೆ ಪ್ರಸಾದ ವಿತರಿಸುವ ಮೂಲಕ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಪಟ್ಟಣದ ರಾಜಭಾಗ ಸವಾರ್ ದರ್ಗಾದಲ್ಲಿರುವ ಮುಸ್ಲಿಮರು ಭ್ರಾತೃತ್ವ ಸಾರಿದ್ದಾರೆ. 

ಬಳ್ಳಾರಿ, ಗದಗ ಮತ್ತು ದಾವಣೆಗೆರೆ ಜಿಲ್ಲೆಗಳಲ್ಲಿ ಅಪಾರ ಸಂಖ್ಯೆಯ ಭಕ್ತ ಸಮೂಹವನ್ನು ಹೊಂದಿರುವ ರಾಜಭಾಗ ಸವಾರ್ ದರ್ಗಾದಲ್ಲಿ ಕಳೆದ ರಾತ್ರಿ ಮುಸ್ಲಿಮರ ಯುವಕರ ಪಡೆಯೊಂದು ಹನುಮ ಮಾಲಾದಾರಿಗಳು ಮತ್ತು ಅಯ್ಯಪ್ಪ ಮಾಲಾದಾರಿಗಳಿಗೆ ಪ್ರಸಾದ ವಿತರಿಸಿದ್ದು, ಇತರರಿಗೆ ಮಾದರಿಯಾಗಿದ್ದಾರೆ. 

ಕೇವಲ ಮುಸ್ಲಿಮರಷ್ಟೇ ಅಲ್ಲ ಇಲ್ಲಿನ ಹಿಂದೂಗಳೂ ಕೂಡ ಮುಸ್ಲಿಮರು ಆಚರಿಸುವ ರಂಜಾನ್ ಉಪವಾಸ ಸಂದರ್ಭದಲ್ಲಿ ಇಪ್ತಿಯಾರ್ ಕೂಡ ನೀಡುತ್ತಾರೆ. 

ಈ ಮೂಲಕ ಇಲ್ಲಿನ ಹಿಂದೂ ಹಾಗೂ ಮುಸ್ಲಿಮರು ಹೊಸ ಪದ್ಧತಿಗೆ ನಾಂದಿ ಹಾಡಿದ್ದು, ಭಾವೈಕ್ಯತೆಯ ಕೇಂದ್ರದಿಂದ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಷ್ಯಾ-ಭಾರತ ಸ್ನೇಹ ಕಡಿತಕ್ಕೆ ಅಮೆರಿಕ ಮುಂದು, ಭಾರತದೊಂದಿಗೆ ಬಹುನಿರೀಕ್ಷಿತ ವ್ಯಾಪಾರ ಒಪ್ಪಂದ ಸಾಧ್ಯತೆ!

ಮೋದಿ ಜೊತೆ ಮಾತನಾಡಿದ್ದೇನೆ, ಭಾರತ ರಷ್ಯಾದಿಂದ ತೈಲ ಖರೀದಿಯನ್ನು ಕಡಿಮೆ ಮಾಡಿದೆ: Donald Trump

ICC Womens World Cup 2025: ಟೂರ್ನಿಯಿಂದ ಪಾಕಿಸ್ತಾನ ಔಟ್, ಭಾರತದಲ್ಲೇ ಸೆಮಿಫೈನಲ್, ಫೈನಲ್ ಪಂದ್ಯ

ಕೆನಡಾದಲ್ಲಿ ಪಂಜಾಬಿ ಗಾಯಕ ತೇಜಿ ಕಹ್ಲೋನ್ ಮೇಲೆ ಗುಂಡಿನ ದಾಳಿ: ಬುದ್ದಿ ಕಲಿಯದಿದ್ದರೆ ಸಾವು ನಿಶ್ಚಿತ; ಗೋದಾರಾ ಗ್ಯಾಂಗ್ ಎಚ್ಚರಿಕೆ

ಮಹಿಳೆಯರಿಗೆ ಆನ್‌ಲೈನ್ 'ಜಿಹಾದಿ ಕೋರ್ಸ್' ಆರಂಭಿಸಿದ ಜೈಶ್ ಉಗ್ರ ಸಂಘಟನೆ, ಶುಲ್ಕ ಕೇವಲ 500 ರೂ!

SCROLL FOR NEXT