ಬಂಡೀಪುರ ಅಭಯಾರಣ್ಯದ ಅಧಿಕಾರಿಗಳ ತಂಡ 
ರಾಜ್ಯ

ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಬಂಡೀಪುರ ಅರಣ್ಯ ಅಧಿಕಾರಿಗಳಿಗೆ ತರಬೇತಿ 

ಕೌಶಲ್ಯಾವೃದ್ಧಿಗೆ ಬಂಡೀಪುರ ಹುಲಿ ರಕ್ಷಿತಾರಣ್ಯದ ಅರಣ್ಯಾಧಿಕಾರಿಗಳಿಗೆ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಇದೇ ಮೊದಲ ಬಾರಿಗೆ ತರಬೇತಿ ನೀಡಲಾಗುತ್ತಿದೆ. 

ಬೆಂಗಳೂರು: ಕೌಶಲ್ಯಾವೃದ್ಧಿಗೆ ಬಂಡೀಪುರ ಹುಲಿ ರಕ್ಷಿತಾರಣ್ಯದ ಅರಣ್ಯಾಧಿಕಾರಿಗಳಿಗೆ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಇದೇ ಮೊದಲ ಬಾರಿಗೆ ತರಬೇತಿ ನೀಡಲಾಗುತ್ತಿದೆ.


ಕಾಜಿರಂಗಾ ರಾಷ್ಟ್ರೀಯ ಉದ್ಯಾನವನ ಯುನೆಸ್ಕೊ ಘೋಷಿತ ವಿಶ್ವ ಪಾರಂಪರಿಕ ತಾಣವಾಗಿದ್ದು ಇದು ಕೇವಲ ಅತ್ಯುತ್ತಮ ಪ್ರವಾಸಿ ತಾಣ ಮಾತ್ರವಲ್ಲದೆ, ಅರಣ್ಯ ಸಿಬ್ಬಂದಿಗಳಿಗೆ ಉತ್ತಮ ತರಬೇತಿ ತಾಣವೆಂದು ಕೂಡ ಪ್ರಸಿದ್ಧಿ ಪಡೆದಿದೆ.


ಬಂಡೀಪುರದ ವಿಶೇಷ ಹುಲಿ ರಕ್ಷಿತಾರಣ್ಯದಲ್ಲಿ ನಿಯೋಜನೆಗೊಂಡಿರುವ 18 ಮಂದಿ ಉಪ ಅರಣ್ಯಾಧಿಕಾರಿಗಳಿಗೆ ನಿನ್ನೆಯಿಂದ 8 ದಿನಗಳ ಕಾಲ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ.


ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಮಾಜಿ ಪ್ರಧಾನ ಮುಖ್ಯ ಸಂರಕ್ಷಕಾಧಿಕಾರಿ(ಪಿಸಿಸಿಎಫ್) ಬಿ ಜೆ ಹೊಸ್ಮಟ್, ಸೇವಾ ನಿರತ ಪಿಸಿಸಿಎಫ್ ಅವರ ಆದೇಶದ ಮೇರೆಗೆ ನಾನು ಅಧಿಕಾರಿಗಳ ತಂಡವನ್ನು ಇಲ್ಲಿಗೆ ಕರೆತಂದಿದ್ದೇನೆ. ಇಲ್ಲಿ ನಡೆಯುವ ಕಾರ್ಯಾಗಾರ, ತರಬೇತಿ ಮತ್ತು ಸಮಸ್ಯೆಗಳ ವಿನಿಮಯದಿಂದ ವನ್ಯಜೀವಿಗಳ ಸಂರಕ್ಷಣೆ ಹೆಚ್ಚಾಗುತ್ತದೆ. ಇಲ್ಲಿನ ಕಷ್ಟವಾದ ಪರ್ವತ ಪ್ರದೇಶ ಮತ್ತು ಭೌಗೋಳಿಕ ಪ್ರದೇಶಗಳಿಂದಾಗಿ ಕಾಜಿರಂಗಾ ಕಲಿಯುವಿಕೆಗೆ ಉತ್ತಮ ಸ್ಥಳ. ಈ ಸ್ಥಳವು ಖಡ್ಗಮೃಗಗಳು ಮತ್ತು ಹುಲಿಗಳಿಗೆ ನೆಲೆಯಾಗಿದೆ, ಇಲ್ಲಿ ಸಾಕಷ್ಟು ಮಾನವ-ಪ್ರಾಣಿ ಸಂಘರ್ಷ ಏರ್ಪಡುತ್ತದೆ. ಹೊಸದಾಗಿ ನೇಮಕಗೊಂಡವರು ಮತ್ತು ಎಂಟು ವರ್ಷಗಳ ಸುದೀರ್ಘ ತರಬೇತಿಯ ನಂತರ ಕೇವಲ ಆರು ತಿಂಗಳ ಹಿಂದೆ ನಿಯೋಜನೆಗೊಂಡವರು ಇಲ್ಲಿಗೆ ಬಂದಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT