ಸಂತೋಷ್ ಹೆಗ್ಡೆ 
ರಾಜ್ಯ

ಪ್ರಜಾಪ್ರಭುತ್ವದ ಮೌಲ್ಯಗಳು ಹಂತ ಹಂತವಾಗಿ ಕುಸಿಯುತ್ತಿವೆ- ಸಂತೋಷ್ ಹೆಗ್ಡೆ ವಿಷಾದ

ಇಂದು ದೇಶದಲ್ಲಿನ ಪ್ರಜಾ ಪ್ರಭತ್ವದ ಮೌಲ್ಯಗಳು ಹಂತ ಹಂತವಾಗಿ ಕುಸಿಯುತ್ತಿದ್ದು ಕೆಲವರು, ಕೆಲವರಿಗಾಗಿ, ಕೆಲವರಿಗೋಸ್ಕರವಾಗಿಯೇ ಸ್ವಾತಂತ್ರ್ಯ ಸೀಮಿತಮಾಗಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ  ಸಂತೋಷ್ ಹೆಗ್ಡೆ ವಿಷಾಧಿಸಿದ್ದಾರೆ.

ಬೆಂಗಳೂರು: ಮಾನವೀಯತೆ ಎಂಬುದು ನಮ್ಮ ಸಮಾಜದಲ್ಲಿ ಹಿರಿಯರು ಕಟ್ಟಿದ ಮೌಲ್ಯ, ಮಾನವ ಎಂದು ಹೇಳುವುದು ಪ್ರಮುಖವಲ್ಲ ಅದನ್ನು ಕಾರ್ಯರೂಪಗೊಳಿಸುವುದು ಮಾನವೀಯತೆ‌ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ  ಸಂತೋಷ್ ಹೆಗ್ಡೆ ಅಭಿಪ್ರಾಯ ಪಟ್ಟರು.

ಪತ್ರಕರ್ತರ ಭವನದಲ್ಲಿಂದು ಕರ್ನಾಟಕ ಮಾನವ ಹಕ್ಕುಗಳ ಜನ ಜಾಗೃತಿ ವೇದಿಕೆ ಆಯೋಜಿಸಿದ್ದ, ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ದೇಶದಲ್ಲಿನ ಪ್ರಜಾ ಪ್ರಭತ್ವದ ಮೌಲ್ಯಗಳು ಹಂತ ಹಂತವಾಗಿ ಕುಸಿಯುತ್ತಿದ್ದು ಕೆಲವರು, ಕೆಲವರಿಗಾಗಿ, ಕೆಲವರಿಗೋಸ್ಕರವಾಗಿಯೇ ಸ್ವಾತಂತ್ರ್ಯ ಸೀಮಿತಮಾಗಿದೆ. ಜನಪ್ರತಿನಿಧಿಗಳು ಜನರ ಸೇವಕರಲ್ಲ ಮಾಲೀಕರೆಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಒಬ್ಬ ವ್ಯಕ್ತಿಯಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿಲ್ಲ. ಅದು ಇಡೀ ಸಮಾಜದಿಂದಲೇ ಆಗುತ್ತಿದೆ. ತಳಮಟ್ಟದ ಜನರಿಗೆ ಸಂವಿಧಾನದ ಆಶಯದಂತೆ ಸಿಗಬೇಕಾದ ಎಲ್ಲಾ ಸೌಲಭ್ಯಗಳು ಇಂದು ಶ್ರೀಮಂತರ ಪಾಲಾಗುತ್ತಿವೆ. ಸಾಮಾಜಿಕ ಮೌಲ್ಯಗಳ ಹರಣದಿಂದ ಗೌರವಯುತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಯಾರಲ್ಲಿ ಅಧಿಕಾರ, ಶಕ್ತಿ, ಹಣವಿದೆಯೋ ಅಂತಹ ವ್ಯಕ್ತಿಗಳ ಅಭಿವೃದ್ಧಿಯಾಗುತ್ತಿದೆ. ಬಡವರ, ಹಿಂದುಳಿದವರ ಅಭಿವೃದ್ಧಿ ಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT