ಸಂಗ್ರಹ ಚಿತ್ರ 
ರಾಜ್ಯ

ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ದಾಳಿ: ಇಬ್ಬರು ವಶ

ನಕಲಿ ಅಂಕ ಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 

ಬೆಂಗಳೂರು: ನಕಲಿ ಅಂಕ ಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 

ನಗರದ ಮಹಾಲಕ್ಷ್ಮಿಲೇಔಟ್ ನಲ್ಲಿರುವ ವೆಂಕಟೇಶ್ವರ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಸಂಸ್ಥೆಯು ಆಂಧ್ರ ಪ್ರದೇಶ ಮೂಲದ ಶ್ರೀನಿವಾಸ ರೆಡ್ಡಿ ಎಂಬುವವರಿಗೆ ಸೇರಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆಯಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ಹಾಗೂ ಪದವಿ ಮಟ್ಟದ ಅಪಾರ ಪ್ರಮಾಣದ ನಕಲಿ ಅಂಕಪಟ್ಟಿ ಪತ್ತೆಯಾಗಿದೆ. 

ಈ ಸಂಸ್ಥೆಯಲ್ಲಿ ಹಲವು ವಿಶ್ವವಿದ್ಯಾಲಯಗಳ ನಕಲಿ ಅಂಕ ಪಟ್ಟಿಗಳನ್ನು ನೀಡಲಾಗುತ್ತಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ನಕಲಿ ಅಂಕಪಟ್ಟಿ ನೀಡಲು 3 ಲಕ್ಷ ರೂ ವರೆಗೆ ಹಣ ಪಡೆಯಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯಲ್ಲಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT