ಸರಗಳ್ಳ 
ರಾಜ್ಯ

ಬೆಂಗಳೂರು: ಯುವತಿಯ ಸರ ಕಿತ್ತು ಪರಾರಿಯಾಗುತ್ತಿದ್ದ ಕಳ್ಳನ ಬೈಕ್‍ಗೆ ಗುದ್ದಿ ಹಿಡಿದ ಆಟೋ ಚಾಲಕ, ವಿಡಿಯೋ ವೈರಲ್!

ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಹೋಗುತ್ತಿದ್ದ ಕಳ್ಳನನ್ನು ಗಮನಿಸಿದ ಆಟೋ ಚಾಲಕ ಬೈಕ್‍ಗೆ ಡಿಕ್ಕಿ ಹೊಡೆಸಿ ನಂತರ ಆತನನ್ನು ಹಿಡಿದು ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಹೋಗುತ್ತಿದ್ದ ಕಳ್ಳನನ್ನು ಗಮನಿಸಿದ ಆಟೋ ಚಾಲಕ ಬೈಕ್‍ಗೆ ಡಿಕ್ಕಿ ಹೊಡೆಸಿ ನಂತರ ಆತನನ್ನು ಹಿಡಿದು ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ.

ಮಾರತ್ ಹಳ್ಳಿಯ ಮ್ಯಾಕ್ಸ್ ಶೋ ರೂಂ ಎದುರು ಯುವತಿಯೋರ್ವಳು ನಡೆದುಕೊಂಡು ಹೋಗುತ್ತಿದ್ದನ್ನು ಗಮನಿಸಿದ ಸರಗಳ್ಳ ಆಕೆಯ ಕುತ್ತಿಗೆಗೆ ಕೈ ಹಾಕಿ ಸರ ಕಿತ್ತುಕೊಂಡಿದ್ದಾನೆ. ಕೂಡಲೇ ಯುವತಿ ಕಿರುಚಿಕೊಂಡು ಆತನನ್ನು ಹಿಂಬಾಲಿಸಿದ್ದಾಳೆ. ಇದನ್ನು ಗಮನಿಸಿದ ಆಟೋ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದು ಆತನನ್ನು ಬೀಳಿಸಿ ಹಿಡಿದು ಥಳಿಸಿದ್ದಾರೆ.

ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಇನ್ನು ಆಟೋ ಚಾಲಕ ಹನುಮಂತನ ಸಾಹಸ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹನುಮಂತನ ಸಾಹವನ್ನು ಪ್ರಶಂಸಿಸಿದ ವೈಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋ ಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿ ಅಭಿನಂದಿಸಿದ್ದಾರೆ. ಆರೋಪಿಯನ್ನು ಕೆಜಿ ಹಳ್ಳಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT