ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಶಾಲೆಯಲ್ಲಿ ಜಗಳ, ಪೋಷಕರನ್ನು ಕರೆತರಲು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಶಾಲೆಯಲ್ಲಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಪೋಷಕರನ್ನು ಕರೆದುಕೊಂಡು ಬರುವಂತೆ ಶಾಲೆಯ ಮುಖ್ಯ ಶಿಕ್ಷಕರು ಹೇಳಿದ್ದರಿಂದ ಆತಂಕಗೊಂಡ ವಿದ್ಯಾರ್ಥಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಶಾಲೆಯಲ್ಲಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಪೋಷಕರನ್ನು ಕರೆದುಕೊಂಡು ಬರುವಂತೆ ಶಾಲೆಯ ಮುಖ್ಯ ಶಿಕ್ಷಕರು ಹೇಳಿದ್ದರಿಂದ ಆತಂಕಗೊಂಡ ವಿದ್ಯಾರ್ಥಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೊಮ್ಮಲೂರಿನ ಕೆಆರ್‌ಎಲ್‌ಎಸ್ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ವೇಣುಗೋಪಾಲ್(13) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಶಾಲೆಯಲ್ಲಿ ವೇಣುಗೋಪಾಲ್ ಮತ್ತು ಸಹಪಾಠಿಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ವೇಣುಗೋಪಾಲ್ ಚಾಕು ಹಿಡಿದು ಇತರ ವಿದ್ಯಾರ್ಥಿಗಳಿಗೆ ಬೆದರಿಸಿದ್ದ. ಇದನ್ನು ಕಂಡ ಶಿಕ್ಷಕರು ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡು ಶಾಲೆ ಒಳಗೆ ಬರಬೇಕಾದರೆ ಪೋಷಕರನ್ನು ಕರೆತರುವಂತೆ ಸೂಚಿಸಿದ್ದರು.

ಪೋಷಕರಿಗೆ ಈ ವಿಷಯ ತಿಳಿದರೆ ಮನೆಯಲ್ಲೂ ಬಯ್ಯುತ್ತಾರೆ ಎಂದು ಆತಂಕಗೊಂಡ ವೇಣುಗೋಪಾಲ್ ಮನೆಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಶಾಲೆ ಎದುರು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇತರ ಪೋಷಕರೂ ಶಾಲೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT