ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಶಾಲೆಯಲ್ಲಿ ಜಗಳ, ಪೋಷಕರನ್ನು ಕರೆತರಲು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಶಾಲೆಯಲ್ಲಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಪೋಷಕರನ್ನು ಕರೆದುಕೊಂಡು ಬರುವಂತೆ ಶಾಲೆಯ ಮುಖ್ಯ ಶಿಕ್ಷಕರು ಹೇಳಿದ್ದರಿಂದ ಆತಂಕಗೊಂಡ ವಿದ್ಯಾರ್ಥಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಶಾಲೆಯಲ್ಲಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಪೋಷಕರನ್ನು ಕರೆದುಕೊಂಡು ಬರುವಂತೆ ಶಾಲೆಯ ಮುಖ್ಯ ಶಿಕ್ಷಕರು ಹೇಳಿದ್ದರಿಂದ ಆತಂಕಗೊಂಡ ವಿದ್ಯಾರ್ಥಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೊಮ್ಮಲೂರಿನ ಕೆಆರ್‌ಎಲ್‌ಎಸ್ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ವೇಣುಗೋಪಾಲ್(13) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಶಾಲೆಯಲ್ಲಿ ವೇಣುಗೋಪಾಲ್ ಮತ್ತು ಸಹಪಾಠಿಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ವೇಣುಗೋಪಾಲ್ ಚಾಕು ಹಿಡಿದು ಇತರ ವಿದ್ಯಾರ್ಥಿಗಳಿಗೆ ಬೆದರಿಸಿದ್ದ. ಇದನ್ನು ಕಂಡ ಶಿಕ್ಷಕರು ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡು ಶಾಲೆ ಒಳಗೆ ಬರಬೇಕಾದರೆ ಪೋಷಕರನ್ನು ಕರೆತರುವಂತೆ ಸೂಚಿಸಿದ್ದರು.

ಪೋಷಕರಿಗೆ ಈ ವಿಷಯ ತಿಳಿದರೆ ಮನೆಯಲ್ಲೂ ಬಯ್ಯುತ್ತಾರೆ ಎಂದು ಆತಂಕಗೊಂಡ ವೇಣುಗೋಪಾಲ್ ಮನೆಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಶಾಲೆ ಎದುರು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇತರ ಪೋಷಕರೂ ಶಾಲೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT