ರಾಜ್ಯ

ವಾಣಿಜ್ಯನಗರಿ ಹುಬ್ಬಳ್ಳಿಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ ಆಗಮನ

Raghavendra Adiga

ಹುಬ್ಬಳ್ಳಿ: ಟಿಬೆಟಿಯನ್ ಧರ್ಮಗುರು ದಲೈಲಾಮಾ ಕರ್ನಾಟಕದ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. 

ಗೋವಾದಿಂದ ಖಾಸಗಿ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ದಲೈಲಾಮಾ ಅವರನ್ನು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ. ಈ ಸಮಯ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಉಪವಿಭಾಗಾಧಿಕಾರಿ ಮಹಮದ್ ಜುಬೇರ್, ಡಿಸಿಪಿ ನಾಗೇಶ್.ಡಿ.ಎಲ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಹಾಜರಿದ್ದರು.

ಇಂದಿನಿಂದ ಡಿ. 24ರವರೆಗೆ ಮುಂಡಗೋಡದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮವೊಂದರಲ್ಲಿ ದಲೈಲಾಮಾ ಹಾಗೂ ಅವರ ಹನ್ನೆರಡು ಮಂದಿ ಅನುಚರರು ಭಾಗವಹಿಸಲಿದ್ದಾರೆ.

ಬುಧವಾರ (ಡಿ.11) ರಂದು ದಲೈಲಾಮಾ ಗೋವಾದ ಪಣಜಿಯಲ್ಲಿ ಗೋವಾ ವಿಶ್ವವಿದ್ಯಾಲಯವು ಆಯೋಜಿಸಿದ್ದ “ನಮ್ಮ ಆಧುನಿಕ ಕಾಲದಲ್ಲಿ ಪ್ರಾಚೀನ ನಳಂದ ಬೋಧನೆಗಳ ಪ್ರಸ್ತುತತೆ” ಕುರಿತು ಉಪನ್ಯಾಸ ನೀಡಿದ್ದಾರೆ.

ಮುಂಡಗೋಡದಲ್ಲಿ ಡಿಸೆಂಬರ್ 24ರವರೆಗೆ ಅವರ ಕಾರ್ಯಕ್ರಮಗಳು ಬೋಧನೆಗಳು ಮತ್ತು ಆತ್ಮವಿಶ್ವಾಸ ಹೆಚ್ಚಿಸಬಲ್ಲ ಉಪನ್ಯಾಸದ ಕಾರ್ಯಕ್ರಮಗಳು ನಡೆಯಲಿದೆ.

SCROLL FOR NEXT