ರಾಜ್ಯ

ಬಿಎಂಟಿಸಿ ರಾಯಭಾರಿಯಾಗಿ ಪುನೀತ್ ರಾಜ್ ಕುಮಾರ್ ಆಯ್ಕೆ 

Sumana Upadhyaya

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ಹಿಂದೆ ಸರ್ಕಾರದ ಹಲವು ಸಂಸ್ಥೆಗಳಿಗೆ, ಕರ್ನಾಟಕ ಸರ್ಕಾರದ ಹಲವು ಯೋಜನೆಗಳಿಗೆ ರಾಯಭಾರಿಯಾಗಿ ಕೆಲಸ ಮಾಡಿದ್ದಾರೆ. ಅದನ್ನೀಗ ಮತ್ತೆ ಮುಂದುವರಿಸಿಕೊಂಡು ಹೋಗಿರುವ ಅವರು ಬೆಂಗಳೂರು ಮಹಾನಗರ ಸಾರಿಗೆ ನಿಗಮದ ರಾಯಭಾರಿಯಾಗಿದ್ದಾರೆ. 


ಬೆಂಗಳೂರು ಮಹಾನಗರದ ರಸ್ತೆಗಳ ಟ್ರಾಫಿಕ್ ಜಾಮ್, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಖಾಸಗಿ ವಾಹನಗಳ ಬಳಕೆಯಿಂದ ಸಾರ್ವಜನಿಕರು ಸಂಚರಿಸಲು ಬಹಳ ಕಷ್ಟಪಡುತ್ತಿದ್ದು ಈ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆಯನ್ನು ಸಾಧ್ಯವಾದಷ್ಟು ಬಳಸಿ ಜನರು ಸಹಕರಿಸುವಂತೆ ಸರ್ಕಾರ, ಮಹಾನಗರ ಸಾರಿಗೆ ನಿಗಮ ಮನವಿ ಮಾಡಿಕೊಳ್ಳುತ್ತಲೇ ಬಂದಿದೆ. 


ಈ ನಿಟ್ಟಿನಲ್ಲಿ ಜನರನ್ನು ಪ್ರೇರೇಪಿಸಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಎಂಟಿಸಿ ರಾಯಭಾರಿಯಾಗಿದ್ದಾರೆ. 

SCROLL FOR NEXT