ವಿಶ್ವೇಶ್ವರ ತೀರ್ಥ ಸ್ವಾಮೀಜಿ 
ರಾಜ್ಯ

ಪೌರತ್ವ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ತೊಂದರೆಯಾಗದು: ಪೇಜಾವರ ಶ್ರೀ

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಪ್ಘಾನಿಸ್ತಾನದ ಮುಸ್ಲೀಂ ಸಮುದಾಯ ಹೊರತುಪಡಿಸಿ ವಲಸೆ ಬಂದಿರುವ ಆರು ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುವ ಸಂಬಂಧ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅನಗತ್ಯ ಗೊಂದಲ ಸರಿಯಲ್ಲ ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ರಾಯಚೂರು: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಪ್ಘಾನಿಸ್ತಾನದ ಮುಸ್ಲೀಂ ಸಮುದಾಯ ಹೊರತುಪಡಿಸಿ ವಲಸೆ ಬಂದಿರುವ ಆರು ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುವ ಸಂಬಂಧ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅನಗತ್ಯ ಗೊಂದಲ ಸರಿಯಲ್ಲ ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದ ಮುಸ್ಲೀಂ ಸಮುದಾಯದವರಿಗೆ ಈ ತಿದ್ದುಪಡಿ ಕಾಯ್ದೆಯಿಂದ ಯಾವುದೇ ತೊಂದರೆ ಎದುರಾಗದು. ಬಾಂಗ್ಲಾದಿಂದ ವಲಸೆ ಬಂದಿರುವವ ಧಾರ್ಮಿಕ ಅಲ್ಪ ಸಂಖ್ಯಾತರ ಮೇಲಿನ ಅಭಿಮಾನದಿಂದ ಪೌರತ್ವ ನೀಡಲಾಗುತ್ತಿದೆ. ದೇಶದಲ್ಲಿ ಅನೇಕ ದಶಕಗಳಿಂದ ವಾಸವಾಗಿರುವವರಿಗೆ ಯಾವುದೇ ಆತಂಕಬೇಡ. ಪೌರತ್ವ ಕಾಯಿದೆ ಬಗ್ಗೆ ವಿನಾಕಾರಣ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದರು.

ಈಶಾನ್ಯ ರಾಜ್ಯಗಳ ನಿವಾಸಿಗಳಿಗೆ ಅವರ ಪ್ರಾದೇಶಿಕ ಅಸ್ಮಿತೆಗೆ ಧಕ್ಕೆ ಬರುತ್ತದೆ ಎಂಬ ಆತಂಕವಿದೆ. ಹಾಗಾಗಿಯೇ ಅಲ್ಲಿ ಹೋರಾಟ ನಡೆಯುತ್ತಿದೆ. ಕೇಂದ್ರ ಸರ್ಕಾರ ಸೇನೆ ಬಳಸಿ ನಿಯಂತ್ರಿಸುವ ಬದಲು ಮನವರಿಕೆ ಮಾಡಿಕೊಟ್ಟು ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಹಿಂದೂಗಳಿಗೆ ಅವರದ್ದೇ ಆದ ದೇಶ ಎಂದರೆ ಅದು ಭಾರತ. ಹಾಗಾಗಿ ವಲಸೆ ಬಂದಿರುವ ಹಿಂದೂಗಳಿಗೆ ಆಶ್ರಯ ನೀಡುವ ಕೇಂದ್ರದ ಉದ್ದೇಶ ಸರಿಯಾಗಿದೆ. ಬಾಂಗ್ಲಾದಿಂದ ವಲಸೆ ಬಂದಿರುವವರಿಗೆ ಅನ್ಯ ರಾಜ್ಯಗಳಲ್ಲಿ ಆಶ್ರಯ ನೀಡದೇ ಪಶ್ಚಿಮ ಬಂಗಾಳದಲ್ಲೇ ಇರುವಂತೆ ನಿಯಂತ್ರಿಸಬೇಕು ಎಂದರು.

ಪೌರತ್ವ ಕಾಯಿದೆ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶದ ಮುಸ್ಲಿಂರನ್ನು ದೇಶದಿಂದ ಹೊರಗೆ ಕಳುಹಿಸಲು ಈ ಕಾಯ್ದೆಗೆ ಅನುಕೂಲವಾಗಲಿದೆ. ಹೀಗಾಗಿ ಸ್ಥಳೀಯ ಮುಸ್ಲೀಂ ಸಮುದಾಯದವರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಟ್ರಸ್ಟ್ ರಚನೆ ಪ್ರಕ್ರಿಯೆಗೆ ಕೇಂದ್ರ ಚಾಲನೆ ನೀಡಿದ್ದು, ಸುಪ್ರೀಂಕೋರ್ಟ್ ಸೂಚನೆಯಂತೆ ಕಾಲಮಿತಿಯೊಳಗೆ ಟ್ರಸ್ಟ್ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

T20 World Cup 2026: ಪಾಕ್ ವಿರುದ್ಧದ ಪಂದ್ಯದಲ್ಲಿ 'ಹ್ಯಾಂಡ್ ಶೇಕ್' ಮಾಡದಿರಲು ಟೀಂ ಇಂಡಿಯಾ ನಿರ್ಧಾರ!

ಬಾಂಗ್ಲಾದಲ್ಲಿ BNP ಅಧಿಕಾರ; ಹೊಸ ಸರ್ಕಾರದಲ್ಲಿ ಮುಹಮ್ಮದ್ ಯೂನಸ್ ಗೂ ಮಹತ್ವದ ಸ್ಥಾನ? ರೆಹಮಾನ್ ಬೆಂಬಲ?

Pak ಫೀಲ್ಡ್ ಮಾರ್ಷಲ್ ಮುನೀರ್​ಗೆ ಜಾಗತಿಕ ಮುಖಭಂಗ; ಮ್ಯೂನಿಚ್ ಭದ್ರತಾ ಸಮ್ಮೇಳನದ ಗೇಟ್‌ನಲ್ಲೇ ತಡೆದ ಸಿಬ್ಬಂದಿ; Video!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

SCROLL FOR NEXT