ರಾಜ್ಯ

ಚಾಮರಾಜನಗರ: ಎನ್ಎಸ್ಎಸ್ ಶಿಬಿರಕ್ಕೆ ತೆರಳಿದ ವಿದ್ಯಾರ್ಥಿ ನೀರುಪಾಲು

Vishwanath S

ಚಾಮರಾಜನಗರ: ಎನ್ಎಸ್ಎಸ್ ಶಿಬಿರಕ್ಕೆ ತೆರಳಿದ ವಿದ್ಯಾರ್ಥಿಯೋರ್ವ ನೀರುಪಾಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಅರೇಪುರದಲ್ಲಿ ನಡೆದಿದೆ.

ಎನ್ಎಸ್ಎಸ್ ಶಿಬಿರಕ್ಕೆ ತೆರಳಿದ ವಿದ್ಯಾರ್ಥಿ ನೀರುಪಾಲುಗುಂಡ್ಲುಪೇಟೆ ತಾಲೂಕಿನ ಚೆನ್ನವಡೆಯನಪುರದ ಅಖಿಲ್(18) ಮೃತ ದುರ್ದೈವಿ. 

ಬೇಗೂರು ಸರ್ಕಾರಿ ‌ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಅಖಿಲ್ ಅರೇಪುರದಲ್ಲಿ ಏರ್ಪಡಿಸಿದ್ದ ಎನ್ಎಸ್ಎಸ್​ ಶಿಬಿರದಲ್ಲಿ ಭಾಗವಹಿಸಿದ್ದ ವೇಳೆ ಸಂಜೆ ವಾಯುವಿಹಾರಕ್ಕೆ ತೆರಳುತ್ತೇನೆಂದು ಈಜಲು ಹೋಗಿ ಮೃತಪಟ್ಟಿದ್ದಾನೆ.

ಜೊತೆಗೆ ತೆರಳಿದ್ದ ಮತ್ತೋರ್ವ ಅದೃಷ್ಟವಶಾತ್ ಪಾರಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಶವ ಹೊರತೆಗೆದಿದ್ದು, ಮೃತನ ಸಂಬಂಧಿಕರು ಕಾಲೇಜಿನ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದರಿಂದ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಬೇಗೂರು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ವರದಿ: ಗೂಳಿಪುರ ನ೦ದೀಶ

SCROLL FOR NEXT