ಸಾಂದರ್ಭಿಕ ಚಿತ್ರ 
ರಾಜ್ಯ

ಗಾಂಜಾ ಮಾರಾಟ; ಒರಿಸ್ಸಾ ಮೂಲದ ಆರೋಪಿ ಸೆರೆ; 15 ಕೆ.ಜಿ.ಗಾಂಜಾ ವಶ

ಒರಿಸ್ಸಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಮಾರತ್‌ಹಳ್ಳಿ ಪೊಲೀಸರು ಆತನಿಂದ 5 ಲಕ್ಷ ರೂ. ಮೌಲ್ಯದ  15 ಕೆ.ಜಿ. ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಒರಿಸ್ಸಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಮಾರತ್‌ಹಳ್ಳಿ ಪೊಲೀಸರು ಆತನಿಂದ 5 ಲಕ್ಷ ರೂ. ಮೌಲ್ಯದ  15 ಕೆ.ಜಿ. ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಒರಿಸ್ಸಾದ ರಾಯಗಡ ಜಿಲ್ಲೆಯ ಬಿಸ್ಸಂಕಟ್ಟಕ್ ಠಾಣಾ ವ್ಯಾಪ್ತಿಯ  ಕೊಡಗುಲಾಮಿ ಗ್ರಾಮದ ನಿವಾಸಿ  ಕಿರದ್ ಮಿಶಾಲ್ (35) ಬಂಧಿತ ಆರೋಪಿ. ಈತ ಒರಿಸ್ಸಾ ರಾಜ್ಯದಿಂದ ರೈಲು ಮೂಲಕ ಬೆಂಗಳೂರಿಗೆ ಅಪರ ಪ್ರಮಾಣದಲ್ಲಿ ಗಾಂಜಾವನ್ನು  ಲಗ್ಗೇಜ್ ಟ್ರಾವೆಲ್ ಬ್ಯಾಗ್‌ನಲ್ಲಿ ತಂದು ಮಾರಾಟ ಮಾಡುತ್ತಿದ್ದ.

ನಗರದ ಐಟಿ ಟೆಕ್‌ಪಾರ್ಕ್‌, ಕಾಲೇಜುಗಳು, ಪಿಜಿಗಳು ಇರುವ ಜನದಟ್ಟಣೆ ಪ್ರದೇಶಗಳಲ್ಲಿ ಸ್ಥಳೀಯ ಗಾಂಜಾ  ಪೆಡ್ಲರ್‌ಗಳಿಗೆ ಈತ ನಿರಂತರ ಗಾಂಜಾವನ್ನು ಮಾರಾಟ ಮಾಡುತ್ತಿದ್ದ. 

ಈತನ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿ ವಶಕ್ಕೆ ಪಡೆದು ಆತನಿಂದ 5 ಲಕ್ಷ ರೂ. ಮೌಲ್ಯದ 15 ಕೆ.ಜಿ.ಯಷ್ಟು ಅಪಾರ ಪ್ರಮಾಣದ  ನಿಷೇಧಿತ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT