ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: 36 ವರ್ಷಗಳ ನಂತರ ಕೊನಗೂ ಕಳ್ಳನನ್ನು ಹಿಡಿದ ಪೊಲೀಸರು

ಭತ್ತದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು 36 ವರ್ಷಗಳ ನಂತರ ಧಾರವಾಡ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ: ಭತ್ತದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು 36 ವರ್ಷಗಳ ನಂತರ ಧಾರವಾಡ ಪೊಲೀಸರು ಬಂಧಿಸಿದ್ದಾರೆ.

ಧಾರವಾಡದ ಎತ್ತಿನಗುಡ್ಡ ಗ್ರಾಮದ ಶಂಕರಪ್ಪ ಜೋಗ್ದೇರಿ ಬಂಧಿತ ಆರೋಪಿ. ಈತ 1983 ರಲ್ಲಿ  ಭತ್ತದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. 2 ದಿನಗಳ ಹಿಂದೆ ಆತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

7 ಮಂದಿ ವಿರುದ್ಧ ಭತ್ತದ ಮಾಲೀಕರು ದೂರು ದಾಖಲಿಸಿದ್ದರು,  ಉಳಿದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು , ಒಬ್ಬ ನಾಪತ್ತೆಯಾಗಿದ್ದ. 

ಬಾಕಿ ಉಳಿದ ಪ್ರಕರಣಗಳನ್ನು ಕ್ಲಿಯರ್ ಮಾಡುವಂತೆ ಇತ್ತೀಚೆಗೆ ಜಿಲ್ಲಾ ಪೊಲೀಸ್ ಎಸ್ ಪಿ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ತಂಡ ರಚಿಸಿದ್ದ ಪೊಲೀಸರು ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT