ಮಲ್ಲೇಶ್ವರಂ ವೇಗಾಸ್ ಆಸ್ಪತ್ರೆ ಮಾಲಿಕತ್ವ ವಿವಾದ; ಸಿಸಿಬಿ ನೋಟಿಸ್ 
ರಾಜ್ಯ

ಮಲ್ಲೇಶ್ವರಂ ವೇಗಾಸ್ ಆಸ್ಪತ್ರೆ ಮಾಲಿಕತ್ವ ವಿವಾದ; ಸಿಸಿಬಿ ನೋಟಿಸ್ 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸುದ್ದಿಯಾಗಿದ್ದ ಮಲ್ಲೇಶ್ವರಂನ ವೇಗಾಸ್ ಆಸ್ಪತ್ರೆ ಈಗ ಮತ್ತೊಮ್ಮೆ ಕಾನೂನು ವ್ಯಾಜ್ಯದಿಂದ ಸುದ್ದಿಯಲ್ಲಿದೆ. 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸುದ್ದಿಯಾಗಿದ್ದ ಮಲ್ಲೇಶ್ವರಂನ ವೇಗಾಸ್ ಆಸ್ಪತ್ರೆ ಈಗ ಮತ್ತೊಮ್ಮೆ ಕಾನೂನು ವ್ಯಾಜ್ಯದಿಂದ ಸುದ್ದಿಯಲ್ಲಿದೆ. 
  
ಆಸ್ಪತ್ರೆಯ ಹಕ್ಕಿಗಾಗಿ ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಆಸ್ಪತ್ರೆ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಆಸ್ಪತ್ರೆ ನಿರ್ಮಿಸಿದ್ದ  ರಮೇಶ್ ,ನಾರಾಯಣ ಸ್ವಾಮಿ, ಬಾಲಾಜಿ ಎಂಬ ಪಾಲುದಾರರು ಈಗ ಅದರ ಹಕ್ಕಿಗಾಗಿ ಹೋರಾಡುತ್ತಿದ್ದಾರೆ. ವೈಮನಸ್ಸಿನ ಕಾರಣ ಒಬ್ಬರು ನೀರು ನಿಲ್ಲಿಸಿದ್ದರೆ ಮತ್ತೊಬ್ಬರು ವಿದ್ಯುತ್ ಸಂಪರ್ಕ ಕಟ್ ಮಾಡುತ್ತಿದ್ದರು.ಅದಕ್ಕಾಗಿ ಟ್ಯಾಂಕರ್ ಮೂಲಕ ನೀರು,ಜನರೇಟರ್ ಮೂಲಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು.
  
ಇದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ ಇಂತಹ ಆಸ್ಪತ್ರೆಯಲ್ಲಿ ಯಾವ ಧೈರ್ಯದ ಮೇಲೆ ಮಾಜಿ ಮುಖ್ಯಮಂತ್ರಿಗಳಿಗೆ ಚಿಕಿತ್ಸೆ ನೀಡಿದಿರಿ ಎಂದು ಪ್ರಶ್ನಿಸಿದೆ. ನಂತರ, ಪ್ರಕರಣವನ್ನು ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT