ಕಳ್ಳತನದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಗೇ ಸುಪಾರಿ ನೀಡಿದ ಪತ್ನಿ 
ರಾಜ್ಯ

ಕಳ್ಳತನದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಗೇ ಸುಪಾರಿ ನೀಡಿದ ಪತ್ನಿ

ಗಮನ ಬೇರೆಡೆ ಸೆಳೆದು ಕಳವು ಮಾಡುತ್ತಿದ್ದ ಕೃತ್ಯದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಯ ಕೊಲೆಗೆ ಪತ್ನಿಯೇ ಸುಪಾರಿ ನೀಡಿದ್ದ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. 

ಬೆಂಗಳೂರು: ಗಮನ ಬೇರೆಡೆ ಸೆಳೆದು ಕಳವು ಮಾಡುತ್ತಿದ್ದ ಕೃತ್ಯದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಯ ಕೊಲೆಗೆ ಪತ್ನಿಯೇ ಸುಪಾರಿ ನೀಡಿದ್ದ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. 

ಈ ಕೃತ್ಯದಲ್ಲಿ ಭಾಗಿಯಾಗಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ನಾಲ್ವರನ್ನು ಬಂಧಿಸುವಲ್ಲಿ ಕೋಣನಕುಂಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಡೊಂಕಣಿ ಕೋಟೆಯ ಮಂಜುಳಾ ಆಲಿಯಾಸ್ ಕಳ್ಳ ಮಂಜಿ (೪೪) ಆಕೆಯ ಪ್ರಿಯಕರ ಮೈಸೂರಿನ ಕೊಡಗೆಹಳ್ಳಿಯ ಚೆಲುವರಾಯಿ ಆಲಿಯಾಸ್ ಚೆಲುವ (೪೨) ಅಲ್ಲದೇ ಮೆಡಹಳ್ಳಿಯ ಗಣೇಶ್ ಆಲಿಯಾಸ್ ಗಣಿ (25) ಮಂಜುನಾಥ್ (27) ನನ್ನು ಬಂಧಿಸಲಾಗಿದೆ.

ಆರೋಪಿಗಳಿಂದ 7 ಲಕ್ಷ ಮೌಲ್ಯದ 223 ಗ್ರಾಂ ಚಿನ್ನ, 5,630 ನಗದು, ಮಚ್ಚು, ಲಾಂಗ್, ಮೊಬೈಲ್ ವಶಪಡಿಸಿಕೊಂಡು ಪ್ರಮುಖ ಆರೋಪಿ ಕಳ್ಳ ಮಂಜಿ, ಪತಿ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣವನ್ನು ಭೇದಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಡಾ.ರೋಹಿಣಿ ಕಟೋಜ್ ತಿಳಿಸಿದ್ದಾರೆ. ವಯಸ್ಸಾದ ಮಹಿಳೆಯರನ್ನು ಗುರುತಿಸಿ ತಮಗೆ ಹಣ ಸಿಕ್ಕಿದ್ದು ಅದನ್ನು ಹಂಚಿಕೊಳ್ಳೋಣವೆಂದು ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆಣೆ ಪ್ರಮಾಣ ಮಾಡುವಂತೆ ಹೇಳಿ ಅವರು ಧರಿಸಿದ್ದ ಚಿನ್ನಾಭರಣವನ್ನು ಬಿಚ್ಚಿಸಿ ಗಮನ ಬೇರೆಡೆ ಸೆಳೆದು ದೋಚಿ ಕಳ್ಳ ಮಂಜಿ ಪರಾರಿಯಾಗುತ್ತಿದ್ದಳು.

ಕಳ್ಳ ಮಂಜಿಗೆ ಇತರ ಮೂವರು ನೆರವು ನೀಡುತ್ತಿದ್ದರು. ತನ್ನ ಕಳವಿನ ಬಗ್ಗೆ ಪೊಲೀಸರಿಗೆ ಪತಿ ಮಾಹಿತಿ ನೀಡುತ್ತಿದ್ದಾನೆ ಎಂದು ಪತಿ ಶಂಕರನನ್ನು ಬಂಧಿತ ಆನೇಕಲ್‌ನ ಗಣೇಶ್ ಆಲಿಯಾಸ್, ಮಂಜುನಾಥ್ ಆಲಿಯಾಸ್ ಮಂಜುಗೆ ಒಂದು ಲಕ್ಷ ರೂ.ಗಳ ಸುಪಾರಿ ಕೊಟ್ಟು ಕೊಲೆಗೆ ಸಂಚು ರೂಪಿಸಿದ್ದಳು.

ಹಣ ಪಡೆದ ಆರೋಪಿಗಳು ಕಳೆದ ನ. ೨೫ ರಂದು ಮುಂಜಾನೆ ೫ರ ವೇಳೆ ಗೊಟ್ಟಿಗೆರೆಯ ಪಿಳ್ಳಗಾನಹಳ್ಳಿಯ ಮಾರುತಿ ಬಡಾವಣೆ ಬಳಿ ಮಾರುತಿ ಆಲ್ಟೋ ಕಾರ್ ನಲ್ಲಿ ಶಂಕರನ ಬೈಕ್ ಗೆ ಡಿಕ್ಕಿ ಹೊಡೆದು ಬೀಳಿಸಿ ಲಾಂಗ್ ನಿಂದ ತಲೆಗೆ ಹೊಡೆದು ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶಂಕರನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಕೋಣನಕುಂಟೆ ಪೊಲೀಸ್ ಇನ್ಸ್ ಪೆಕ್ಟರ್ ಧರ್ಮೇಂದ್ರ ಮತ್ತವರ ಸಿಬ್ಬಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆರೋಪಿ ಕಳ್ಳ ಮಂಜಿ ಪ್ರಿಯಕರ ಚೆಲುವರಾಯನ ಜೊತೆ ಯಳ್ಳಂದೂರು, ಅರಕಲಗೂಡು, ಶ್ರವಣಬೆಳಗೊಳ, ಹುಣಸೂರು, ಚನ್ನರಾಯಪಟ್ಟಣ, ಮಾಗಡಿ ರಸ್ತೆ ಇನ್ನಿತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಮನ ಬೇರೆಡೆ ಸೆಳೆದು ಕಳವು ಮಾಡಿದ್ದ ಪ್ರಕರಣವನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT