ಬಿಡಿಎ ಸ್ಥಳದಲ್ಲಿ ಅಕ್ರಮ ಕಟ್ಟಡ: ರೂ.300 ಕೋಟಿ ಮೌಲ್ಯದ ಆಸ್ತಿ ವಶಕ್ಕೆ 
ರಾಜ್ಯ

ಬಿಡಿಎ ಸ್ಥಳದಲ್ಲಿ ಅಕ್ರಮ ಕಟ್ಟಡ: ರೂ.300 ಕೋಟಿ ಮೌಲ್ಯದ ಆಸ್ತಿ ವಶಕ್ಕೆ

ಬಿಡಿಎ ಜಾಗ ಒತ್ತುವರಿ ಮಾಡಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿತ್ತ ಕಟ್ಟಡ ತೆರವುಗೊಳಿಸಿ ಸುಮಾರು ರೂ.300 ಕೋಟಿ ಮೌಲ್ಯದ ಆಸ್ತಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 

ಬೆಂಗಳೂರು: ಬಿಡಿಎ ಜಾಗ ಒತ್ತುವರಿ ಮಾಡಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿತ್ತ ಕಟ್ಟಡ ತೆರವುಗೊಳಿಸಿ ಸುಮಾರು ರೂ.300 ಕೋಟಿ ಮೌಲ್ಯದ ಆಸ್ತಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 

ನಿನ್ನೆ ಬೆಳಿಗ್ಗೆ ಬಿಡಿಎ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಅವರ ನೇತೃತ್ವಲ್ಲಿ ಬಿಡಿಎ ಅಧಿಕಾರಿಗಳು ನಾಗವಾರದ ಅನಧಿಕೃತ ಕಟ್ಟಡಗಳ ಮೇಲೆ ದಾಳಿ ನಡೆಸಿದರು. ನಾಗವಾರದ ಸರ್ವೆ ನಂ.75ರಲ್ಲಿ ಎಚ್'ಬಿಆರ್ 2ನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ 6.3 ಎಕರೆ ಜಾಗ ಪ್ರದೇಶವನ್ನು ಪ್ರಾಧಿಕಾರ ಮೀಸಲಿಟ್ಟಿದೆ. ಈ ಪ್ರದೇಶದಲ್ಲಿ 1.26 ಎಕರೆ ವರ್ತುಲ ರಸ್ತೆಗೆ ಮತ್ತು ಉಳಿದ 4.17 ಎಕರೆ ಪ್ರದೇಶವನ್ನು ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ವಶದಲ್ಲಿತ್ತು. ಈ ಪ್ರದೇಶವನ್ನು ಸ್ಥಳೀಯರು ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ಕಟ್ಟಡಗಳು ಮತ್ತು ಶೆಡ್ ಗಳನ್ನು ನಿರ್ಮಿಸಿಕೊಂಡಿದ್ದರು. ಬಿಡಿಎ ಅಧಿಕಾರಿಗಳು ಅನಧಿಕೃತ ಶೆಟ್ ಗಳನ್ನು ತೆರವುಗೊಳಿಸಿ ನಿವೇಶನಗಳನ್ನು ವಶಪಡಿಸಿಕೊಂಡಿದ್ದಾರೆ. ಒತ್ತುವರಿಯಾದ ನಿವೇಶನಗಳ ಮೌಲ್ಯ ರೂ.300 ಕೋಟಿ ಎಂದು ಅಂದಾಜಿಸಲಾಗಿದೆ. 

ನಗರದಲ್ಲಿ ಸುಮಾರೂ ರೂ.5 ಸಾವಿರ ಕೋಟಿ ಮೌಲ್ಯದ ಒತ್ತುವರಿಯಾಗಿದ್ದು, ಶೀಘ್ರವೇ ಒತ್ತುವರಿದಾರರನ್ನು ತೆರವುಗೊಳಿಸಿ ಪ್ರಾಧಿಕಾರದ ವಶಕ್ಕೆ ನಿವೇಶನವಗಳನ್ನು ಹಿಂಪಡೆಯಲು ಕಾರ್ಯಾಚರಣೆ ನಡೆಸುತ್ತಿದೆ ಎಂದು ಆಯುಕ್ತ ಡಾ.ಜಿ.ಸಿ.ಪ್ರಕಾಶ್ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ ಡಾ.ಶಿವಕುಮಾರ್, ಬಿಡಿಎ ಅಭಿಯಂತರ ಸದಸ್ಯ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT