ಶಿವಮೊಗ್ಗ: ಶ್ರೀಗಂಧ ಕಳ್ಳರಿಂದ ಅರಣ್ಯಾಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ 
ರಾಜ್ಯ

ಶಿವಮೊಗ್ಗ: ಶ್ರೀಗಂಧ ಕಳ್ಳರಿಂದ ಅರಣ್ಯಾಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ

ಶ್ರೀಗಂಧದ ಮರ ಕಳ್ಳ ಸಾಗಣೆ ಮಾಡುತ್ತಿದ್ದ ದುಷ್ಕರ್ಮಿಗಳು ಉಪವಲಯ ಅರಣ್ಯಾಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದ ಸೋನಲೆ ಎಂಬಲ್ಲಿ ನಡೆದಿದೆ. 

ಶಿವಮೊಗ್ಗ: ಶ್ರೀಗಂಧದ ಮರ ಕಳ್ಳ ಸಾಗಣೆ ಮಾಡುತ್ತಿದ್ದ ದುಷ್ಕರ್ಮಿಗಳು ಉಪವಲಯ ಅರಣ್ಯಾಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದ ಸೋನಲೆ ಎಂಬಲ್ಲಿ ನಡೆದಿದೆ.

ಗಂಧದ ಮರ ಕಳ್ಳ ಸಾಗಣೆ ಕುರಿತು ಖಚಿತ ಮಾಹಿತಿ ಪಡೆದು ದಾಳಿಗೆ ಮುಂದಾಗಿದ್ದ ಅರಣ್ಯಾಧಿಕಾರಿ ಡಿಆರ್‍ಎಫ್‍ಒ ಗೋವಿಂದರಾಜ್ ಎನ್ನುವವರ ಮೇಲೆ ದುಷ್ಕರ್ಮಿಗಳು ಮಚ್ಚು ಹಾಗು ಶ್ರೀಗಂಧ ತುಂಡಿನಿಂದ ಹಲ್ಲೆ ನಡೆಸಿದ್ದಾರೆ. 

ಗೋವಿಂದರಾಜ್ ಹಾಗೂ ತಂಡ ದಾಳಿ ನಡೆಸಿದ್ದ ವೇಳೆ ಐವರು ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ತೀವ್ರ ಗಾಯಗೊಂಡಿರುವ ಗೋವಿಂದರಾಜ್ ಅವರನ್ನು ಹೊಸನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳೀಯರಾಗಿದ್ದ ಕುಮಾರ್, ಮೋಹನ್ ಸೇರಿ ಐವರು ಹಲ್ಲೆ ನಡೆಸಿದ ಗುಂಪಿನಲ್ಲಿದ್ದರೆಂದುಯ್ ಹೇಳಲಾಗಿದ್ದು ಸಧ್ಯ ಹಲ್ಲೆಕೋರರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅರಣ್ಯ್ ಇಲಾಖೆಯ ಹಿರಿಯ ಅಧಿಕಾರಿಗಳು ಆಗಮಿಸಿದ್ದಾರೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT