ಪೌರತ್ವ ಕಾಯ್ದೆ ಕಿಚ್ಚು: ರಾಷ್ಟ್ರಗೀತೆ ಹಾಡಿ ಪ್ರತಿಭಟನಾಕಾರರ ಮನಗೆದ್ದ ಬೆಂಗಳೂರು ಪೊಲೀಸ್ ಅಧಿಕಾರಿ 
ರಾಜ್ಯ

ಪೌರತ್ವ ಕಾಯ್ದೆ ಕಿಚ್ಚು: ರಾಷ್ಟ್ರಗೀತೆ ಹಾಡಿ ಪ್ರತಿಭಟನಾಕಾರರ ಮನಗೆದ್ದ ಬೆಂಗಳೂರು ಪೊಲೀಸ್ ಅಧಿಕಾರಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಡೀ ದೇಶದಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು, ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟಕಾರರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆಂಬ ಆಕ್ರೋಶಗಳು ವ್ಯಕ್ತವಾಗುತ್ತಿರುವ...

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಡೀ ದೇಶದಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು, ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟಕಾರರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆಂಬ ಆಕ್ರೋಶಗಳು ವ್ಯಕ್ತವಾಗುತ್ತಿರುವ ನಡುವಲ್ಲೇ, ಬೆಂಗಳೂರು ಪೊಲೀಸ್ ಅಧಿಕಾರಿಯೊಬ್ಬರು ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನಕಾರರ ಮನಗೆದ್ದಿದ್ದಾರೆ. 

ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರು ರಾಷ್ಟ್ರಗೀತೆ ಹಾಡುವ ಮೂಲಕ ಪೌರತ್ವ ಕಾಯ್ದೆ ವಿರುದ್ಧ ಪುರಭವನದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮನಗೆದ್ದಿದ್ದು, ಪ್ರತಿಭಟನೆ ಕೈಬಿಟ್ಟು ಸ್ಥಳದಿಂದ ತೆರಳುವಂತೆ ಮಾಡಿದ್ದಾರೆ. 

ಚೇತನ್ ಸಿಂಗ್ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿರುವ ಹಾಗೂ ರಾಷ್ಟ್ರಗೀತೆ ಹಾಡಿ ಪ್ರತಿಭಟನಾಕಾರರ ಮನಗೆದ್ದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಅಲ್ಲದೆ, ಈ ವಿಡಿಯೋವಿಗೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ. 

ವಿಡಿಯೋದಲ್ಲಿ ಸ್ಥಳದಿಂದ ತೆರಳುವಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಇದಕ್ಕೆ ಪ್ರತಿಭಟನಾಕಾರರನ್ನು ನಿರಾಕರಿಸಿದ್ದಾರೆ. ಬಳಿಕ ಪ್ರತಿಭಟನೆಗಳನ್ನು ಸಮಾಜ ವಿರೋಧಿ ಶಕ್ತಿಗಳು ತಮ್ಮ ಲಾಬಕ್ಕಾಗಿ ಹೇಗೆ ಬಳಸಿಕೊಳ್ಳುತ್ತವೆ ಎಂಬುದನ್ನು ವಿವರಿಸಿರುವ ಚೇತನ್ ಸಿಂಗ್ ಅವರು, ತಮ್ಮ ಮೇಲೆ ನಂಬಿಕೆ ಇಡುವುದಾದರೆ ತಮ್ಮೊಂದಿಗೆ ಎಲ್ಲರೂ ರಾಷ್ಟ್ರಗೀತೆ ಹಾಡುವಂತೆ ತಿಳಿಸಿದ್ದಾರೆ. ಈ ವೇಳೆ ಅಧಿಕಾರಿಯ ಮಾತನ್ನು ಕೇಳಿರುವ ಪ್ರತಿಭಟನಾಕಾರರು ಚೇತನ್ ಸಿಂಗ್ ಅವರೊಂದಿಗೆ ರಾಷ್ಟ್ರಗೀತೆಯನ್ನು ಹಾಡಿ, ಪ್ರತಿಭಟನಾ ಸ್ಥಳದಿಂದ ತೆರಳಿರುವುದು ಕಂಡು ಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT