ಯಡಿಯೂರಪ್ಪ 
ರಾಜ್ಯ

ಮಂಗಳೂರು ಹಿಂಸಾಚಾರ: ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದಿರುವ ಪ್ರತಿಭಟನೆ ಹಾಗೂ ಹಿಂಸಾಚಾರದ ಕುರಿತು ಕೇಂದ್ರಕ್ಕೆ ರಾಜ್ಯ ಸರ್ಕಾರ ಗುರುವಾರ ವರದಿ ಸಲ್ಲಿಸಿದೆ.

ಬೆಂಗಳೂರು: ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದಿರುವ ಪ್ರತಿಭಟನೆ ಹಾಗೂ ಹಿಂಸಾಚಾರದ ಕುರಿತು ಕೇಂದ್ರಕ್ಕೆ ರಾಜ್ಯ ಸರ್ಕಾರ ಗುರುವಾರ ವರದಿ ಸಲ್ಲಿಸಿದೆ. 

ಬೆಂಗಳೂರು, ಕಲಬುರಗಿ, ಮಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪೌರತ್ವ ಕಾಯ್ದೆ ಜಾರಿಗೆ ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಅಲ್ಲದೆ, ಮಂಗಳೂರಿನಲ್ಲಿ ಗುರುವಾರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸರ ಗೋಲಿಬಾರ್'ಗೆ ಇಬ್ಬರು ಮೃತಪಟ್ಟಿದ್ದಾರೆ. 

ಇನ್ನೊಂದೆಡೆ ಬೆಂಗಳೂರಿನಲ್ಲಿ ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಪ್ರಮುಖ ಗಣ್ಯರ ಬಂಧನವಾಗಿದೆ. ಈ ಎಲ್ಲಾ ಘಟನಾವಳಿಗಳನ್ನು ಕುರಿತು ಕೇಂದ್ರಕ್ಕೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ. 

ತಮ್ಮ ನಿವಾಸದಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಬೆಳಿಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ  ಅವರು, ಸಂಜ ಮತ್ತೆ ಗೃಹ ದಳ ಮುಖ್ಯಸ್ಥ ಕಮಲ್ ಪಂತ್ ಅವರಿಂದ ಎರಡನೇ ಬಾರಿಗೆ ರಾಜ್ಯದ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಅಧಿಕಾರಿಗಳ ಮಾಹಿತಿ ಕ್ರೋಡೀಕರಿಸಿದ ಗೃಹ ಇಲಾಖೆಯು ಕೇಂದ್ರಕ್ಕೆ ವರದಿ ಕಳುಹಿಸಿದೆ. ಶುಕ್ರವಾರ ಸಹ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಮುಂದುವರೆಯುವ ಸಾಧ್ಯತೆಗಳಿದ್ದು, ಅಗತ್ಯ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!