ಪ್ರಶಸ್ತಿ ಸ್ವೀಕರಿಸುತ್ತಿರುವ ಎ ಟಿ ಪೂವಯ್ಯ 
ರಾಜ್ಯ

ನಾಗರಹೊಳೆ ಉಪ ಸಂರಕ್ಷಣಾಧಿಕಾರಿ ಎ ಟಿ ಪೂವಯ್ಯಗೆ ಬಾಗ್ ಮಿತ್ರಾ ಪ್ರಶಸ್ತಿ 

ಕರ್ನಾಟಕದಲ್ಲಿ ಹುಲಿ ಸಂರಕ್ಷಣೆಗಾಗಿ ಮಾಡಿರುವ ಕೆಲಸಕ್ಕೆ ನಾಗರಹೊಳೆ ಹುಲಿ ರಕ್ಷಿತಾರಣ್ಯದ ಎ ಟಿ ಪೂವಯ್ಯ ಅವರಿಗೆ ರಾಷ್ಟ್ರಮಟ್ಟದ ಡಬ್ಲ್ಯುಡಬ್ಲ್ಯುಎಫ್ ಪಾಟಾ ಬಾಗ್ ಮಿತ್ರಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಹುಲಿ ಸಂರಕ್ಷಣೆಗಾಗಿ ಮಾಡಿರುವ ಕೆಲಸಕ್ಕೆ ನಾಗರಹೊಳೆ ಹುಲಿ ರಕ್ಷಿತಾರಣ್ಯದ ಎ ಟಿ ಪೂವಯ್ಯ ಅವರಿಗೆ ರಾಷ್ಟ್ರಮಟ್ಟದ ಡಬ್ಲ್ಯುಡಬ್ಲ್ಯುಎಫ್ ಪಾಟಾ ಬಾಗ್ ಮಿತ್ರಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ವನ್ಯಜೀವಿಗಳ ಸಂರಕ್ಷಣೆಯಲ್ಲಿ ಕೆಲಸ ಮಾಡಿ 32 ವರ್ಷಗಳ ಅನುಭವ ಹೊಂದಿರುವ ಪೂವಯ್ಯ, ನಾಗರಹೊಳೆ, ಬಂಡೀಪುರ, ಪುಷ್ಪಗಿರಿ ಅರಣ್ಯಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಮರದ ಮಾಫಿಯಾಗಳು, ಅತಿಕ್ರಮಣಕಾರರು ಮತ್ತು ಭೂಗಳ್ಳರಿಂದ ವನ್ಯಜೀವಿಗಳನ್ನು ರಕ್ಷಿಸುವ ಅವರ ಕಾರ್ಯವನ್ನು ನೋಡಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಇವರಿಗೆ 2008ರಲ್ಲಿ ರಾಷ್ಟ್ರೀಯ ಮಟ್ಟದ ಏಷ್ಯಾ ವನ್ಯಜೀವಿ ಸೇವಾ ಅಭಯಾರಣ್ಯ ಪ್ರಶಸ್ತಿ ಬಂದಿತ್ತು. ಕಳೆದ ಅಕ್ಟೋಬರ್ 9ರಂದು ರಾಜ್ಯಪಾಲ ವಜುಭಾಯಿ ವಾಲಾ ಅವರು 65ನೇ ವನ್ಯಜೀವಿ ಸಪ್ತಾಹ ಸಮಾರೋಪ ಕಾರ್ಯಕ್ರಮದಲ್ಲಿ ಗೌರವಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT