ಪ್ರಶಸ್ತಿ ಸ್ವೀಕರಿಸುತ್ತಿರುವ ಎ ಟಿ ಪೂವಯ್ಯ 
ರಾಜ್ಯ

ನಾಗರಹೊಳೆ ಉಪ ಸಂರಕ್ಷಣಾಧಿಕಾರಿ ಎ ಟಿ ಪೂವಯ್ಯಗೆ ಬಾಗ್ ಮಿತ್ರಾ ಪ್ರಶಸ್ತಿ 

ಕರ್ನಾಟಕದಲ್ಲಿ ಹುಲಿ ಸಂರಕ್ಷಣೆಗಾಗಿ ಮಾಡಿರುವ ಕೆಲಸಕ್ಕೆ ನಾಗರಹೊಳೆ ಹುಲಿ ರಕ್ಷಿತಾರಣ್ಯದ ಎ ಟಿ ಪೂವಯ್ಯ ಅವರಿಗೆ ರಾಷ್ಟ್ರಮಟ್ಟದ ಡಬ್ಲ್ಯುಡಬ್ಲ್ಯುಎಫ್ ಪಾಟಾ ಬಾಗ್ ಮಿತ್ರಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಹುಲಿ ಸಂರಕ್ಷಣೆಗಾಗಿ ಮಾಡಿರುವ ಕೆಲಸಕ್ಕೆ ನಾಗರಹೊಳೆ ಹುಲಿ ರಕ್ಷಿತಾರಣ್ಯದ ಎ ಟಿ ಪೂವಯ್ಯ ಅವರಿಗೆ ರಾಷ್ಟ್ರಮಟ್ಟದ ಡಬ್ಲ್ಯುಡಬ್ಲ್ಯುಎಫ್ ಪಾಟಾ ಬಾಗ್ ಮಿತ್ರಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ವನ್ಯಜೀವಿಗಳ ಸಂರಕ್ಷಣೆಯಲ್ಲಿ ಕೆಲಸ ಮಾಡಿ 32 ವರ್ಷಗಳ ಅನುಭವ ಹೊಂದಿರುವ ಪೂವಯ್ಯ, ನಾಗರಹೊಳೆ, ಬಂಡೀಪುರ, ಪುಷ್ಪಗಿರಿ ಅರಣ್ಯಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಮರದ ಮಾಫಿಯಾಗಳು, ಅತಿಕ್ರಮಣಕಾರರು ಮತ್ತು ಭೂಗಳ್ಳರಿಂದ ವನ್ಯಜೀವಿಗಳನ್ನು ರಕ್ಷಿಸುವ ಅವರ ಕಾರ್ಯವನ್ನು ನೋಡಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಇವರಿಗೆ 2008ರಲ್ಲಿ ರಾಷ್ಟ್ರೀಯ ಮಟ್ಟದ ಏಷ್ಯಾ ವನ್ಯಜೀವಿ ಸೇವಾ ಅಭಯಾರಣ್ಯ ಪ್ರಶಸ್ತಿ ಬಂದಿತ್ತು. ಕಳೆದ ಅಕ್ಟೋಬರ್ 9ರಂದು ರಾಜ್ಯಪಾಲ ವಜುಭಾಯಿ ವಾಲಾ ಅವರು 65ನೇ ವನ್ಯಜೀವಿ ಸಪ್ತಾಹ ಸಮಾರೋಪ ಕಾರ್ಯಕ್ರಮದಲ್ಲಿ ಗೌರವಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!