ಸಾಂದರ್ಭಿಕ ಚಿತ್ರ 
ರಾಜ್ಯ

ಅದಿರು ಸಾಗಿಸುತಿದ್ದ ಲಾರಿ ಪಲ್ಟಿ: 10 ಗಣಿ ಕಾರ್ಮಿಕರಿಗೆ ಗಾಯ, ತಪ್ಪಿದ ಬಾರಿ ಅನಾಹುತ

ಅದಿರು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ 10 ಗಣಿ ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ

ಹೊಸಪೇಟೆ: ಅದಿರು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ 10 ಗಣಿ ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ

ಹೊಸಪೇಟೆಯ ಹೊರವಲದ ಶಂಕರ್ ನಗರ ಕ್ಯಾಂಪ್ ಬಳಿಯ  ಪಿ.ಬಿ.ಎಸ್.ಮೈನ್ಸ್ ನಲ್ಲಿ ಅದಿರು ಸಾಗಿಸುತ್ತಿದ್ದ ಲಾರಿಯಲ್ಲಿ ಹದಿನೈದಕ್ಕೂ ಹೆಚ್ಚು ಕಾರ್ಮಿಕರನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಕಾರ್ಮಿಕರನ್ನ ಕರೆದೊಯ್ಯಲು ಪ್ರತ್ಯೇಕ ವಾಹನ ವ್ಯವಸ್ಥೆಮಾಡದೆ ಅದಿರು ಸಾಗಿಸುತಿದ್ದ ಲಾರಿಯಲ್ಲೇ ಕಾರ್ಮಿಕರನ್ನು ಸಾಗಾಟ ಮಾಡಲಾಗುತಿತ್ತು ಎನ್ನಲಾಗಿದೆ.

ಇವರೆಲ್ಲ  ಹೊಸಪೇಟೆ ತಾಲೂಕಿನ ಇಂಗಳಗಿ ಗ್ರಾಮದ ಗಣಿ ಕಾರ್ಮಿಕರಾಗಿದ್ದಾರೆ. ಗಾಯಾಳುಗಳನ್ನು 
ಹೊಸಪೇಟೆ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಗಂಭೀರ ಪರಿಸ್ಥಿತಿಯಲ್ಲಿರುವ 
 ಗಾಯಾಳು ಲಕ್ಷ್ಮಮ್ಮ ಮತ್ತು ಕುರಿ ಜಂಬುನಾಥ ಅವರನ್ನು  ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ. 

ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT