ಬಿಎಂಟಿಸಿ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ ಪ್ರಕರಣ : ಬಾಮೈದ ಸೇರಿ ಇಬ್ಬರ ಬಂಧನ 
ರಾಜ್ಯ

ಬಿಎಂಟಿಸಿ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ ಪ್ರಕರಣ : ಬಾಮೈದ ಸೇರಿ ಇಬ್ಬರ ಬಂಧನ

ಬಿಎಂಟಿಸಿ ಮಹಿಳಾ ಕಂಡಕ್ಟರ್ ಓರ್ವಳ ಮೇಲೆ ನಡೆದಿದ್ದ  ಆ್ಯಸಿಡ್ ದಾಳಿಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಭಾವಮೈದ ಸೇರಿ ಇಬ್ಬರನ್ನು ಪೋಲೀಸರು ಬಂಧಿಸಿದ್ದಾರೆ. 

ಬೆಂಗಳೂರು: ಬಿಎಂಟಿಸಿ ಮಹಿಳಾ ಕಂಡಕ್ಟರ್ ಓರ್ವಳ ಮೇಲೆ ನಡೆದಿದ್ದ  ಆ್ಯಸಿಡ್ ದಾಳಿಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಭಾವಮೈದ ಸೇರಿ ಇಬ್ಬರನ್ನು ಪೋಲೀಸರು ಬಂಧಿಸಿದ್ದಾರೆ.

ಬೆಂಗಳುರು ಉತ್ತರ ವಿಭಾಗದ ಬಾಗಲಗುಂಟೆ ಠಾಣೆ ಪೊಲೀಸರುಗಾಯತ್ರಿನಗರದ ಅರುಣ್ ನಾಯಕ್ (38) ಮತ್ತು ನಾಗಸಂದ್ರದ ಕುಮಾರ್ ನಾಯಕ್ (30) ಎನ್ನುವವರನ್ನು ಬಂಧಿಸಿದ್ದು ಇದರಲ್ಲಿ ಅರುಣ್ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕನಾಗಿದ್ದ. ಸಂತ್ರ್ಸ್ಥೆ ಇಂದಿರಾ ಈತನ ಸಂಬಂಧಿಯಾಗಿದ್ದಲ್ಲದೆ ಸಲುಗೆಯಿಂದ ಇದ್ದರೆಂದು ಹೇಳಲಾಗಿದೆ.

ಆದರೆ ಕಾರಣಾಂತರದಿಂದ ಇಂದಿರಾ ಇತ್ತೀಚೆಗೆ ಅರುಣ್ ಜತೆ ಅಂತರ ಕಾಯ್ದುಕೊಂಡಿದ್ದು ಇದರಿಂಡ ಆರೋಪಿ ಅರುಣ್ ಕ್ರುದ್ದನಾಗಿದ್ದ. ಡಿ.19ರಂದು ಬೆಳಗಿನ ಜಾವ 5.30ರ ಸುಮಾರಿನಲ್ಲಿ ಬಸ್ ನಿರ್ವಾಹಕರಾಗಿದ್ದ ಇಂದಿರಾ ಮನೆಯಿಂದ ಬಸ್ ಡಿಪೋಗೆ ತೆರಳುವಾಗ ತನ್ನ ಸ್ನೇಹಿತನೊಡನೆ ಸೇರಿ ಬೈಕನ್ನೇರಿ ಬಂದು ಆ್ಯಸಿಡ್ ಎರಚಿ ಪರಾರಿಯಾಗಿದ್ದ,

ಆ್ಯಸಿಡ್ ದಾಳಿಯ ಬಳಿಕ ಇಂದಿರಾ ಕುತ್ತಿಗೆ ಹಾಗೂ ಇತರೆ ಭಾಗಗಳಲ್ಲಿ ಗಾಯಗಳಾಗಿದ್ದು ಈ ಸಂಬಂಧ ಆಕೆ ಪೋಲೀಸರಿಗೆ ದೂರಿತ್ತಿದ್ದರು. ದೂರು ಹಿನ್ನೆಲೆ ತನಿಖೆ ಕೈಗೊಂಡ ಇನ್ಸ್‍ಪೆಕ್ಟರ್ ವೆಂಕಟೇಗೌಡ ಮತ್ತು ಸಿಬ್ಬಂದಿಗಳ ತಂಡ  ಆರೋಪಿಗಳ ಬಂಧಿಸುವಲ್ಲಿ ಸಫಲವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT